ಜೆಡಿಎಸ್ ನಾಯಕರಿಗೆ ಸುಮಲತಾ ಟಾಂಗ್ – ಕಹಳೆ ನ್ಯೂಸ್
ಮಂಡ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಜೆಡಿಎಸ್ - ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರ್ ಮತ್ತು ಸುಮಲತಾ ಅಂಬರೀಶ್ ಅವರು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಇದೇ ವೇಳೆ ಮಾತಿನ ಸಮರವೂ ಜೋರಾಗತೊಡಗಿದೆ. ಪ್ರಾಮಾಣಿಕತೆಗೆ ಮೋಸ ಮಾಡುವ ರಾಜಕೀಯ ಬೇಕಾಗಿಲ್ಲ ಎಂದು ಫೇಸ್ಬುಕ್ ನಲ್ಲಿ ಸುಮಲತಾ ಅಂಬರೀಶ್ ಹೇಳಿದ್ದಾರೆ. ಇದ್ದದ್ದು ಇದ್ದ ಹಾಗೆ ಹೇಳುವ ರಾಜಕೀಯ ಅಂಬರೀಶ ಅವರದಾಗಿತ್ತು. ಅವರ ರಾಜಕೀಯ ಅತ್ಯುತ್ತಮ. ಸಮಯಕ್ಕೆ ತಕ್ಕ ಹಾಗೆ ಮಾತನಾಡುವ ಜಾಯಮಾನ ಮಂಡ್ಯದ...







