ಹುಬ್ಬಳ್ಳಿ ಸಮಾವೇಶದಲ್ಲಿ ಕನ್ನಡದಲ್ಲಿ ಮಾತನಾಡಿದ ನರೇಂದ್ರ ಮೋದಿ – ಕಹಳೆ ನ್ಯೂಸ್
ಹುಬ್ಬಳ್ಳಿ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೊದಲಿಗೆ ಕನ್ನಡದಲ್ಲಿ ಮಾತನಾಡಿ ಈ ನೆಲ ಕಲೆ, ಸಾಹಿತ್ಯ, ತಪಸ್ಸು, ತ್ಯಾಗ ಸಂಸ್ಕೃತಿಯ ಇತಿಹಾಸ ಪರಂಪರೆಯನ್ನು ಹೊಂದಿದ ಪುಣ್ಯಭೂಮಿ. ಈ ನಾಡಿಗೆ ಬಂದಿರುವುದು ರೋಮಾಂಚನ ಉಂಟುಮಾಡಿದೆ ಎಂದರು. ಲೋಕಸಭೆ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಲ್ಲಿ ಚಾಲನೆ ನೀಡಿದ ಅವರು.ಸಿದ್ಧಾರೂಢ ಸ್ವಾಮೀಜಿ, ಮೂರು ಸಾವಿರ ಮಠದ ಗುರುಸಿದ್ಧಯೋಗೀಂದ್ರ ಸ್ವಾಮೀಜಿ, ಗದುಗಿನ ವೀರನಾರಾಯಣ ಸ್ವಾಮೀಜಿಗಳಿಗೆ ನನ್ನ ನಮನಗಳು ಎಂದ ಅವರು, ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ...







