Monday, April 27, 2026

ರಾಜಕೀಯ

ರಾಜಕೀಯಸುದ್ದಿ

ಶಾಸಕ ಆನಂದ್ ಸಿಂಗ್ ಭೇಟಿಯಾದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ – ಕಹಳೆ ನ್ಯೂಸ್

ಜನವರಿ 19ರ ಶನಿವಾರ ರಾತ್ರಿ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್‍ನಲ್ಲಿ ಕಂಪ್ಲಿ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ಮತ್ತು ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ನಡುವೆ ಗಲಾಟೆ ನಡೆದಿತ್ತು. ಜೆ.ಎನ್.ಗಣೇಶ್ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದರು. ಆನಂದ್ ಸಿಂಗ್ ಅವರ ಕಣ್ಣಿಗೆ ಪೆಟ್ಟುಬಿದ್ದಿದ್ದು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಆನಂದ್ ಸಿಂಗ್ ಭೇಟಿ ಮಾಡಿದರು. ಶಾಸಕ ಆನಂದ್...
ರಾಜಕೀಯಸಿನಿಮಾಸುದ್ದಿ

ಎಂ ಪಿ ಎಲೆಕ್ಷನ್‍ಗೆ ರಿಯಲ್ ಸ್ಟಾರ್ ಸ್ಪರ್ಧೆ – ಕಹಳೆ ನ್ಯೂಸ್

ಬೆಂಗಳೂರು: ನಟ ರಿಯಲ್ ಸ್ಟಾರ್ ಉಪೇಂದ್ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಮಾತ್ರವಲ್ಲ, ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಯೋಚಿಸಿದ್ದಾರೆ. ನಾವು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಅಧಿಕಾರಕ್ಕಾಗಿ ಯಾವ ಪಕ್ಷದೊಂದಿಗೂ ಸೇರುವುದಿಲ್ಲ. ನಾವು ಮಾಡುವ ಕೆಲಸವನ್ನು ಮಾತ್ರ ಹೇಳುತ್ತೇವೆ. ಜನರ ಬೇಡಿಕೆಗಳನ್ನು ತಿಳಿದುಕೊಂಡು ಪ್ರಣಾಳಿಕೆ ಸಿದ್ಧಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ....
ರಾಜಕೀಯಸುದ್ದಿ

ಸಮ್ಮಿಶ್ರ ಸರ್ಕಾರ ಎಲ್ ಓ ಸಿ ಇದ್ದ ಹಾಗೆ; ಸತೀಶ್ ಜಾರಕಿಹೊಳಿ – ಕಹಳೆ ನ್ಯೂಸ್

ಇನ್ನು ನಾಲ್ಕು ವರ್ಷ ಮೂರು ತಿಂಗಳು ಬಿಜೆಪಿ ಆಪರೇಷನ್ ಕಮಲ ಮಾಡುತ್ತಲೇ ಇರುತ್ತದೆ. ಸಮ್ಮಿಶ್ರ ಸರ್ಕಾರ ಅನ್ನುವುದು ಎಲ್ ಓಸಿ ಇದ್ದ ಹಾಗೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಅನ್ನೋದು ಎಲ್ ಓಸಿ ಇದ್ದಂಗೆ, ಯಾವಾಗಲೂ ನಾವು ಅಲರ್ಟ್ ಆಗಿರಬೇಕು. ಇಲ್ಲದಿದ್ದರೆ ನಮ್ಮ ಮೇಲೆ ಫೈರ್ ಮಾಡಿ ಬಿಡುತ್ತಾರೆ ಎಂದರು. ಇನ್ನು ಕೈ ಶಾಸಕರ ಗಲಾಟೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು,...
ರಾಜಕೀಯಸುದ್ದಿ

ಆಪರೇಷನ್ ಕಮಲ – ರೆಡ್ಡಿಯ ಪಾಳಯದಲ್ಲಿ ಯಾರ‍್ಯಾರು? – ಕಹಳೆ ನ್ಯೂಸ್

ರಾಜದ್ಯ ರಾಜಕಾರಣದಲ್ಲಿ ಆಪರೇಷನ್ ಕಮಲದ ಕಾರ್ಯಚರಣೆಯ ಅಬ್ಬರ ಸದ್ಯಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ, ಆದರೆ ತೆರೆಮರೆಯಲ್ಲಿ ಶಾಸಕರನ್ನು ಸೆಳೆಯಲು ಪ್ರಯತ್ನಗಳು ನಡೆದಿವೆ. ಎ ಶಾಸಕ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಶಾಸಕ ಜೆ.ಎನ್. ಗಣೇಶ್ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿಯ ಪಾಳಯದಲ್ಲಿದ್ದು, ಬಿಜೆಪಿ ಸೇರಲು ಚಿಂತಿಸಿದ್ದಾರೆ ಎಂದು ಹೇಳಲಾಗಿದೆ. ಹಿಂದೆ ಮುಂಬೈ ಹೋಟೆಲ್‍ನಲ್ಲಿ ತಂಗಿದ್ದ ಅತೃಪ್ತ ಶಾಸಕರೊಂದಿಗೆ ಜನಾರ್ದನ ರೆಡ್ಡಿ ಚರ್ಚೆ ನಡೆಸಿದ್ದರು ಎಂದು...
ರಾಜಕೀಯಸುದ್ದಿ

ಪ್ರಿಯಾಂಕಾ ರಾಜಕೀಯ ಪ್ರವೇಶ ಸ್ವಾಗತಾರ್ಹ: ಸಿದ್ದರಾಮಯ್ಯ ಪಕ್ಷಕ್ಕೆ ಬಂದಿದ್ದೇ ಕಾಂಗ್ರೆಸ್ ಮುಗಿಸುವುದಕ್ಕೆ: ಪೂಜಾರಿ – ಕಹಳೆ ನ್ಯೂಸ್

ಮಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಪಕ್ಷಕ್ಕೆ ಬಂದಿದ್ದೇ ಕಾಂಗ್ರೆಸ್ ಮುಗಿಸುವುದಕ್ಕೆ. ಅವರಿಂದಾಗಿ ಮೈತ್ರಿ ಸರ್ಕಾರ ಉಳಿದುಕೊಂಡಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನ ಕುದ್ರೋಳಿಯಲ್ಲಿ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ, ದೇವೇಗೌಡರಿಂದ ಮೈತ್ರಿ ಸರ್ಕಾರ ಉಳಿದಿದೆ. ಸರ್ಕಾರ ಉಳಿಯುವಲ್ಲಿ ದೊಡ್ಡಗೌಡರದ್ದೇ ಮಹತ್ವದ ಪಾತ್ರ ಅಂದರು. ಇದೇ ವೇಳೆ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ವಿಚಾರಕ್ಕೆ ಪ್ರತಿಕ್ರಿಯೆ...
ರಾಜಕೀಯಸುದ್ದಿ

ಬಿ.ಜೆ.ಪಿಯವರು ಧರ್ಮದ ಹೆಸರಿನಲ್ಲಿ ಯುವಕರನ್ನು ಸೆಳೆಯುತ್ತಿದ್ದಾರೆ: ಅಮೃತ್ ಶೆಣೈ – ಕಹಳೆ ನ್ಯೂಸ್

ಪುತ್ತೂರು: ಕಾಂಗ್ರೇಸ್ ಪಕ್ಷವು ಜಾತ್ಯಾತೀತ ಪಕ್ಷವಾಗಿದೆ. ಆದರೆ ಬಿ.ಜೆ.ಪಿಯವರು ಧರ್ಮದ ಹೆಸರಿನಲ್ಲಿ ಯುವಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ ಎಂದು ಎಐಸಿಸಿ ಸದಸ್ಯ ಅಮೃತ್ ಶೆಣೈ ಹೇಳಿದರು. ಅವರು ಬುಧವಾರ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್‍ಗಾಂಧಿ ಪಂಚಾಯತ್‍ರಾಜ್ ಸಂಘಟನೆ ಆಶ್ರಯದಲ್ಲಿ ನಡೆದ ಯುವಶಕ್ತಿ ಮತ್ತು ಭಾರತ ಉಪನ್ಯಾಸದಲ್ಲಿ ಮಾತನಾಡಿದರು. ಆಸ್ಪತ್ರೆ, ಹೆದ್ದಾರಿ, ವಿಶ್ವವಿದ್ಯಾಲಯ ಇತ್ಯಾದಿ ಆಧುನಿಕ ಸವಲತ್ತುಗಳನ್ನು ನಿರ್ಮಾಣ ಮಾಡುತ್ತಾ ಸಾಗುತ್ತಿದ್ದೇವೆ. ಆದರೆ ಧರ್ಮ ನಿರಾಕ್ಷೇಪ ವ್ಯಕ್ತಿಗಳನ್ನು ನಿರ್ಮಾಣ ಮಾಡದೇ ಹೋದರೆ,...
ರಾಜಕೀಯಸುದ್ದಿ

ಇಂದಿರಾ ಗಾಂಧಿ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ – ಕಹಳೆ ನ್ಯೂಸ್

ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಿಯಾಂಕಾ ಗಾಂಧಿ ಅಧಿಕೃತವಾಗಿ ರಾಜಕೀಯ ಅಖಾಡಾಕ್ಕೆ ಇಳಿದಿದ್ದಾರೆ. ಪ್ರಿಯಾಂಕಾ ಗಾಂಧಿಗೆ ಕಾಂಗ್ರೆಸ್ ಪಕ್ಷದಲ್ಲಿ ಇದೇ ಮೊದಲ ಬಾರಿ ಜವಾಬ್ದಾರಿ ನೀಡಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಉತ್ತರ ಪ್ರದೇಶದ ಕೆಲವು ಕ್ಷೇತ್ರಗಳ ಜವಾಬ್ದಾರಿಯನ್ನು ಪ್ರಿಯಾಂಕಾ ಗಾಂಧಿಗೆ ವಹಿಸಲಾಗಿದೆ. ಲೋಕಸಭೆ ಚುನಾವಣೆಗಳು ಹತ್ತಿರುವಾಗುತ್ತಿರುವ ನಡುವೆಯೇ ಈ ನೇಮಕ ನಡೆದಿರುವುದು ತೀವ್ರ ಕುತೂಹಲ ಕೆರಳಿಸಿದೆ. ಈ ಮೊದಲು ಸಹೋದರ ರಾಹುಲ್ ಗಾಂಧಿ, ತಾಯಿ ಸೋನಿಯಾ ಗಾಂಧಿಯವರ ಪ್ರಚಾರ ಸಭೆಗಳಲ್ಲಿ...
ರಾಜಕೀಯಸುದ್ದಿ

ರೆಸಾರ್ಟ್ನಲ್ಲಿ ಕೈ ನಾಯಕರ ಮಾರಾಮಾರಿ..! – ಕಹಳೆ ನ್ಯೂಸ್

ರಾಮನಗರ: ಬಿಡದಿಯ ಈಗಲ್‌ಟನ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರ ನಡುವೆ ಶನಿವಾರ ತಡರಾತ್ರಿ ಹೊಡೆದಾಟ ನಡೆದಿದೆ ಎನ್ನಲಾಗುತ್ತಿದೆ. ಬಳ್ಳಾರಿ ಜಿಲ್ಲೆಯ ಶಾಸಕರಾದ ಆನಂದ ಸಿಂಗ್, ಭೀಮನಾಯ್ಕ ಹಾಗೂ ಜೆ.ಎನ್. ಗಣೇಶ್ ನಡುವೆ ಗಲಾಟೆ ನಡೆದಿದೆ. ಈ ಸಂದರ್ಭ ಗಾಜಿನ ಬಾಟಲಿಯಿಂದ ಆನಂದ ಸಿಂಗ್ ಮೇಲೆ ಹಲ್ಲೆ ನಡೆದಿದೆ. ಗಾಯಗೊಂಡ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಮೂವರು ಶಾಸಕರು ಶನಿವಾರ ಸಂಜೆ ವಿಧಾನಸೌಧದಲ್ಲಿ...
1 196 197 198 199 200 232
Page 198 of 232