ಮಲೆನಾಡಿಗೆ ಎಂಟ್ರಿ: ಕುಮಾರ ಪರ್ವಕ್ಕೆ ಚಾಲನೆ ನೀಡಿದ ಕುಮಾರಸ್ವಾಮಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿರುವ ಶಿವಮೊಗ್ಗ ಲೋಕಸಭಾ ಚುನಾವಣೆ ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ನಡುವಿನ ಕದನ ಎಂದೇ ಬಿಂಬಿಸಲಾಗುತ್ತಿದೆ. ಈಗ ಮುಖ್ಯಮಂತ್ರಿ ಕುಮಾರಸ್ವಾಮಿ ಚುನಾವಣಾ ಪ್ರಚಾರದ ನಿಮಿತ್ತ ಮಲೆನಾಡಿಗೆ ಎಂಟ್ರಿ ಕೊಟ್ಟಿದ್ದು ಕುಮಾರ ಪರ್ವಕ್ಕೆ ಚಾಲನೆ ನೀಡಿದ್ದಾರೆ. ಬಿಜೆಪಿ 2ನೇ ಸುತ್ತಿನ ಪ್ರಚಾರ ಮುಗಿಸಿದರೂ ಕಾಂಗ್ರೆಸ್-ಜೆಡಿಎಸ್ ಇನ್ನೂ ನಾಯಕರ ಮಟ್ಟದ ಪ್ರಚಾರ,ಸಭೆಗೆ ಮಾತ್ರ ಸೀಮಿತವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಹೆಸರು ಇನ್ನು...







