ಮಂಗಳೂರಿನ ಸಮಗ್ರ ಅಭಿವೃದ್ಧಿಗೆ ಶ್ರೀಕರ್ ಪ್ರಭು ಆರಿಸಿ ; ಪ್ರಧಾನಿ ನರೇಂದ್ರ ಮೋದಿ ನನಗೆ ಆದರ್ಶ – ಶಂಖಧ್ವನಿ ಮೂಲಕ ಚುನಾವಣಾ ಘೋಷಣೆ – ಕಹಳೆ ನ್ಯೂಸ್
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನನಗೆ ಆದರ್ಶ, ಅವರ ಮೇಲೆ ನನಗೆ ಪೂರ್ಣ ವಿಶ್ವಾಸವಿದೆ ಮಂಗಳೂರಿನ ಜನತೆ ನನಗೆ ಅವಕಾಶ ನೀಡಿ ಶಾಸಕನಾಗಿ ಆಯ್ಕೆ ಮಾಡಿದಲ್ಲಿ ಮೋದಿ ಅವರಂತೆಯೇ ಹಗಲು ರಾತ್ರಿ ಜನಸೇವೆಗೆ ಮುಂದಾಗುತ್ತೇನೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಹೇಳಿದ್ದಾರೆ. ತಮ್ಮ ಅಂತಿಮ ಹಂತದ ಚುನಾವಣಾ ಪ್ರಚಾರದ ಪ್ರಯುಕ್ತ ಗುರುವಾರ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ...







