ಹಿಂದೂ ವಿರೋಧಿ ಕಾಂಗ್ರೆಸ್ ತಿರಸ್ಕರಿಸಿ – ಹಿಂದೂ ಪರ ಪಕ್ಷಕ್ಕೆ ಮತ ಹಾಕಿ : ವಿಎಚ್ಪಿ ಮುಖಂಡ ಗೋಪಾಲ್
ಮಂಗಳೂರು : ಕಾಂಗ್ರೆಸ್ ನಾಯಕರು ಚುನಾವಣೆ ಸಂದರ್ಭದಲ್ಲಿ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಕೇವಲ ನಾಟಕ ಎಂದು ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂಗಳು ಆಚರಿಸುವ ಹಬ್ಬಗಳನ್ನು ತಡೆಯುವ ಹಾಗೂ ಹತ್ತಿಕ್ಕುವ ಕೆಲಸ ಕಾಂಗ್ರೆಸ್ ಮಾಡಿದ್ದು ಮತಾಂಧ ಶಕ್ತಿಗಳೊಂದಿಗೆ ಕೈ ಜೋಡಿಸಿ ಹಿಂಸೆಗೆ ಪ್ರಚೋದನೆ ನೀಡಿದೆ. ಮನೆಗಳ ಹಟ್ಟಿಗಳಿಂದ ಹಾಗೂ ಗೋಶಾಲೆಗಳಿಂದ ಮಾರಕಾಸ್ತ್ರಗಳ ಮೂಲಕ ಬೆದರಿಸಿ...







