ಮಂಗಳೂರು ದಕ್ಷಿಣ ಅಭ್ಯರ್ಥಿಯಾಗಿ ಬಿಜೆಪಿಯಿಂದ ಬ್ರಿಜೇಶ್ ಚೌಟ ಹೆಸರು ಅಂತಿಮ ? – ಕಹಳೆ ನ್ಯೂಸ್
ಮಂಗಳೂರು, ಏ 12 : ಈ ಬಾರಿಯ ಕರ್ನಾಟಕ ಚುನಾವಣೆ ಈಗಾಗಲೇ ಭಾರೀ ಕುತೂಹಲ ಕೆರಳಿಸಿದ್ದು, ಇಡೀ ದೇಶದ ಚಿತ್ತ ಕರುನಾಡಿನತ್ತ ಹೊರಳುವಂತೆ ಮಾಡಿದೆ. ಭಾರತೀಯ ಜನತಾ ಪಕ್ಷ, ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳಕ್ಕೆ ಈ ಚುನಾವಣೆ ಭಾರೀ ಮಹತ್ವದ್ದಾಗಿದೆ. ದಕ್ಷಿಣದಲ್ಲಿ ಮತ್ತೆ ಬಾಗಿಲು ತೆರೆಯಲು ಬಿಜೆಪಿ ಹವಣಿಸುತ್ತಿದ್ದರೆ, ಸಿಕ್ಕಿರುವ ಆಡಳಿತವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಸೆಣಸಾಡಬೇಕಿದೆ. ಇವರಿಬ್ಬರ ಕಿತ್ತಾಟದ ಲಾಭವನ್ನು ಪಡೆಯಲು ಜೆಡಿಎಸ್ ಹೊಂಚುಹಾಕಿ ಕುಳಿತಿದೆ. ಮೇ 12 ರಂದು...







