ಕಾಂಗ್ರೆಸ್ ನಾಯಕರು ನಡೆಸುತ್ತಿರುವ ದೆಹಲಿ ನಾಟಕವನ್ನು ಕೇಳುವವರೇ ಇಲ್ಲವಾಗಿದೆ..!! : ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್
2004 ರಿಂದ 2014ರ ವರೆಗೆ 10 ವರ್ಷ ಮನಮೋಹನ್ ಸಿಂಗ್ ಅವರ ಹಾಗೂ 2014 ರಿಂದ 2024ರ ವರೆಗೆ ನರೇಂದ್ರ ಮೋದಿಯವರ ಅವಧಿಯಲ್ಲಿ ಪ್ರತೀವರ್ಷ ಕರ್ನಾಟಕಕ್ಕೆ ಬಂದಿರುವ ಅನುದಾನಗಳೆಷ್ಟು? ಎಷ್ಟು ಪ್ರಮಾಣ ಏರಿಕೆಯಾಗಿದೆ? ಯಾವೆಲ್ಲಾ ಬದಲಾವಣೆಗಳಾಗಿವೆ? ಏನೆಲ್ಲ ಅಭಿವೃದ್ಧಿಯಾಗಿದೆ? ಇವೆಲ್ಲದರ ಅರಿವು ಜನಸಾಮಾನ್ಯರಲ್ಲಿ ಈಗಾಗಲೇ ಇದೆ. ಹಾಗಾಗಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ದೆಹಲಿ ನಾಟಕವನ್ನು ಕೇಳುವವರೇ ಇಲ್ಲವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಕಾಂಗ್ರೆಸ್ ನಾಯಕರ ದೆಹಲಿ ಪ್ರವಾಸಕ್ಕೆ,...







