ಪುತ್ತೂರಿನ ಖಾಸಗಿ ಆಸ್ಪತ್ರೆಯ ಸಭಾ ಭವನದಲ್ಲಿ ನಿಷ್ಠಾವಂತ ಬಿಜೆಪಿ ಮತ್ತು ಸಂಘ ಪರಿವಾರ ಕಾರ್ಯಕರ್ತರ ಆಂತರಿಕ ಸಭೆ !? ಪುತ್ತಿಲ ಬಿಜೆಪಿ ಸೇರ್ಪಡೆ ಬಗ್ಗೆ ಮಹತ್ವದ ನಿರ್ಣಯ..!? – ಕಹಳೆ ನ್ಯೂಸ್
ಪುತ್ತೂರು : ಪುತ್ತಿಲ ಪರಿವಾರ ಮತ್ತು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದ್ದು, ಎರಡು ದಿನಗಳ ಹಿಂದೆ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಬಹುತೇಕ ಖಚಿತ ಎಂದು ಬಿಜೆಪಿ ಮತ್ತು ಪುತ್ತಿಲ ಪರಿವಾರದ ಮೂಲಗಳು ಹೇಳುತ್ತಿತ್ತು., ಈ ಹಿನ್ನೆಲೆಯಲ್ಲಿ ಇಂದು ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಪುತ್ತೂರಿನ ಖಾಸಗಿ ಆಸ್ಪತ್ರೆಯ ಸಭಾ ಭವನದಲ್ಲಿ ನಿಷ್ಠಾವಂತ ಬಿಜೆಪಿ ಮತ್ತು ಸಂಘ ಪರಿವಾರ ಕಾರ್ಯಕರ್ತರ ಆಂತರಿಕ ಸಭೆಯೊಂದು ನಡೆದಿದ್ದು,...







