ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆಯಾಗಿ ನಟಿ ಖುಷ್ಬೂ ಸುಂದರ್ ನೇಮಕ
ಚೆನ್ನೈ: ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯನ್ನಾಗಿ ಬುಧವಾರ ನೇಮಕ ಮಾಡಲಾಗಿದೆ. ಮಾಜಿ ಸಂಸದರಾದ ವಿ.ಪಿ ದೊರೈಸಾಮಿ, ಕೆ.ಪಿ.ರಾಮಲಿಂಗಂ, ಶಶಿಕಲಾ ಪುಷ್ಪಾ ಮತ್ತು ಎಂ. ಚಕ್ರವರ್ತಿ ಸೇರಿದಂತೆ ಇತರರು ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ. ಅವರ ನೇಮಕಾತಿಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅನುಮೋದಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಶವ ವಿನಾಯಕನ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ...







