ಕಾರ್ಕಳದಲ್ಲಿ ವಿ ಸುನೀಲ್ ಕುಮಾರ್ ಬಿರುಸಿನ ಮತಪ್ರಚಾರ : ತಾಲೂಕಿನ ಅಭಿವೃದ್ಧಿಗಾಗಿ ಶ್ರಮಿಸಿದ ಕಾರ್ಯಗಳನ್ನ ನೆನೆದು ಮತ್ತಷ್ಟು ಅಭಿವೃದ್ಧಿ ನಡೆಸಲು ಅವಕಾಶ ನೀಡುವಂತೆ ಮತದಾರರಲ್ಲಿ ಮನವಿ – ಕಹಳೆ ನ್ಯೂಸ್
ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸುನೀಲ್ ಕುಮಾರ್ ಇಂದು ಕಾರ್ಕಳದಲ್ಲಿ ಬಿರುಸಿನ ಮತಪ್ರಚಾರ ನಡೆಸಿದ್ದು, ಬೆಳ್ಮಣ್ ಪರಿಸರದಲ್ಲಿ ಮತಯಾಚಿಸಿ ಜನತೆಯನ್ನ ಉದ್ದೇಶಿಸಿ ಮಾತನಾಡಿದ್ದಾರೆ. ಶಾಸಕನಾಗಿ, ಸಚಿವನಾಗಿ ಸ್ಧಾನವನ್ನ ಜವಾಬ್ಧಾರಿಯುತವಾಗಿ ನಿರ್ವಹಿಸಿದ್ದೇನೆ ಎಂಬ ವಿಶ್ವಾಸವಿದೆ. ಅನೇಕ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ಸಾಕಾರವಾಗಿದೆ.. ಅಂತರ್ಜಲ ವೃದ್ಧಿಗೆ ದಾಖಲೆ ಕಿಂಡಿ ಅಣೆಕಟ್ಟುಗಳು, ಕೆರೆಗಳ ಅಭಿವೃದ್ಧಿ, ಸರಕಾರಿ ಆಸ್ಪತ್ರೆ, ಕಟ್ಟಡಗಳ ಆಧುನೀಕರಣ, ಶಿಕ್ಷಣ ಕ್ಷೇತ್ರದ ಉನ್ನತೀಕರಣ, ಸೇತುವೆಗಳು, ಧ್ವಿಪಥ...







