Tuesday, March 10, 2026

ರಾಜಕೀಯ

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಅರೆಸ್ಟ್ – ಕಹಳೆ ನ್ಯೂಸ್

ಕಲಬುರಗಿ: ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ (Milind College) ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ (Congress) ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಖರ್ಗೆ ಕುಟಂಬದ ಒಡೆತನದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ....
ಜಿಲ್ಲೆರಾಜಕೀಯಸುದ್ದಿ

ಕಾಂಗ್ರೆಸ್‌ ಯುವ ಕಾರ್ಯಕರ್ತೆಯ ಶವ ಸೂಟ್‌ಕೇಸ್‌ನಲ್ಲಿ ಪತ್ತೆ-ಕಹಳೆ ನ್ಯೂಸ್

ರೋಹ್ತಕ್: ಕಾಂಗ್ರೆಸ್‌ ಕಾರ್ಯಕರ್ತೆಯೊಬ್ಬರ ಶವ ಹರ್ಯಾಣದ ರೋಹ್ತಕ್ ಜಿಲ್ಲೆಯ ಸಂಪ್ಲಾದ ಬಸ್‌ ನಿಲ್ದಾಣದಲ್ಲಿ ಸೂಟ್‌ಕೇಸ್‌ನೊಳಗೆ ಪತ್ತೆಯಾಗಿದೆ. ಇಲ್ಲಿ ಸ್ಥಳೀಯಾಡಳಿತ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ ಯುವ ಕಾಂಗ್ರೆಸ್‌ ಕಾರ್ಯಕರ್ತೆಯ ಶವ ಪತ್ತೆಯಾಗಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಕೊಲೆಯಾದ ಕಾಂಗ್ರೆಸ್‌ ಕಾರ್ಯಕರ್ತೆಯನ್ನು ಹಿಮಾನಿ ನರ್ವಾಲ್‌ (22) ಎಂದು ಗುರುತಿಸಲಾಗಿದೆ. ಬಸ್‌ ನಿಲ್ದಾಣದ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್‌ ಆಗ್ರಹಿಸಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇತಿಹಾಸದಲ್ಲಿ ಮೊದಲ ಬಾರಿಗೆ ಫೆ.27ರಿಂದ ವಿಧಾನಸೌಧದ ಆವರಣದಲ್ಲಿ 4 ದಿನಗಳ ಪುಸ್ತಕ ಮೇಳ ಆಯೋಜಿಸಿದ ಸ್ಪೀಕರ್ ಯು.ಟಿ.ಖಾದರ್ – ಕಹಳೆ ನ್ಯೂಸ್

ಬೆಂಗಳೂರು : ಇತಿಹಾಸದಲ್ಲಿ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ 4 ದಿನಗಳ ಪುಸ್ತಕ ಮೇಳ ನಡೆಯುತ್ತಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು. ಪುಸ್ತಕಮೇಳದ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದರು. ಫೆ.27, 28, ಮಾ.01 ಮತ್ತು 02 ರವರೆಗೆ ವಿಧಾನಸೌಧದಲ್ಲಿ ಪುಸ್ತಕಮೇಳ ನಡೆಯಲಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ. ಮಾ.2 ರಂದು ಸಾಧುಕೋಕಿಲ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿಗಳು ನಡೆಯಲಿದೆ ಎಂದರು. ಲೇಖಕರು ಪುಸ್ತಕ ಬಿಡುಗಡೆ ಮಾಡುತ್ತಾರೆ....
ದೆಹಲಿರಾಜಕೀಯಸುದ್ದಿ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದ.ಕ. ಸಂಸದ ಕ್ಯಾ.ಚೌಟ ಬಿಜೆಪಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ-ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರವಾಗಿ ಎಲ್ಲೆಡೆ ವ್ಯಾಪಕ ಪ್ರಚಾರ ನಡೆಯುತ್ತಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೂಡ ಇಂದು ಹಲವೆಡೆ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಜೆಟ್ ಅಧಿವೇಶದ ಹಿನ್ನಲೆಯಲ್ಲಿ ದೆಹಲಿಗೆ ತೆರಳಿರುವ ಕ್ಯಾ. ಚೌಟ, ಕಸ್ತೂರ್ಬಾ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನೀರಜ್ ಬಸೋಯಾ ಪರ ಇಲ್ಲಿನ ಸತ್ಯ ಜೀವನ ಲೆಪ್ರಸಿ ಸೊಸೈಟಿಯಲ್ಲಿ, ಹರಿ ನಗರ...
ದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ಇದು ಬಡವರ, ಮಧ್ಯಮ ವರ್ಗ, ಮಹಿಳೆಯರು ಹಾಗೂ ರೈತರ ಪರವಾದ ಬಜೆಟ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್- ಕಹಳೆ ನ್ಯೂಸ್ 

ಮಂಗಳೂರು : ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್,ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ಅದರಲ್ಲೂ ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಆದಾಯ ತೆರಿಗೆ ವ್ಯಾಪ್ತಿಯನ್ನು 12 ಲಕ್ಷಕ್ಕೆ ಏರಿಸಲಾಗಿದೆ. ಇದರಿಂದ ಮಧ್ಯಮ ವರ್ಗದ ಬಹಳಷ್ಟು ಅನುಕೂಲ ವಾಗಲಿದೆ. ಇದಕ್ಕಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಅಭಿನಂದಿಸುವುದಾಗಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮತ್ತೆ ಕೈ ಹಿಡಿಯುತ್ತಾರ ಡಾ. ಕೆ ಸುಧಾಕರ್..?- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಬಿಜೆಪಿ ಪಾಳಯದಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಳಿಕ ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿ ವೈ ವಿಜಯೇಂದ್ರ ಅವರ ವಿರುದ್ಧ ಸಿಡಿದೆದ್ದ ಶ್ರೀರಾಮುಲು ಪಕ್ಷ ಬಿಡುಗ ಕುರಿತು ಮಾತನಾಡಿದ್ದು, ಬಿಜೆಪಿ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿತ್ತು. ಇದೀಗ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿದ್ದ ಡಾ. ಕೆ ಸುಧಾಕರ್ ಅವರು ಮತ್ತೆ ಕೈ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ-ಕಹಳೆ ನ್ಯೂಸ್

ಮಂಗಳೂರು: ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್‌ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 'ಪಕ್ಷದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್‌ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ' ಎಂದು ಚುನಾವಣಾಧಿಕಾರಿ ರಾಜೇಶ್ ಕಾವೇರಿ ತಿಳಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 2024 ಜನವರಿಯಲ್ಲಿ ಸತೀಶ್‌ ಕುಂಪಲ ಅವರನ್ನು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಂಗಾಮಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮುಡಾ ಹಗರಣದಲ್ಲಿ ಕೊನೆಗೂ ಇಡಿಯಿಂದ ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ ಇನ್ನಾದರೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಮಂಗಳೂರು: ಮೈಸೂರಿನ ಮುಡಾದಲ್ಲಿ ನಡೆದ ಅಕ್ರಮಗಳ ಆಳ-ಅಗಲ ಒಂದೊAದಾಗಿಯೇ ಬಯಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುವ ಮೊದಲು ಸಿಎಂ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಿ ಆ ಹುದ್ದೆಯ ಘನತೆ ಕಾಪಾಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ. ಈ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯ(ಇಡಿ) ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಂಸದರು, ಬಡವರಿಗೆ ಮಂಜೂರಾಗಬೇಕಿದ್ದ ನಿವೇಶನಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು, ದಲ್ಲಾಳಿಗಳಿಗೆ ನೀಡಿದ್ದು...
1 4 5 6 7 8 232
Page 6 of 232