Thursday, July 23, 2026

ರಾಜಕೀಯ

ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಇನ್ನುಮುಂದೆ ಅಧಿವೇಶನದ ಬಳಿಕ “ಸಂಸದರೊಂದಿಗೆ ಸಂಸತ್ತಿನ ಸಂವಾದ” ಕಾರ್ಯಕ್ರಮ: ಸಂಸದ ಕ್ಯಾ. ಚೌಟ

ಮಂಗಳೂರು: ಪ್ರತಿಪಕ್ಷವಾದ ಕಾಂಗ್ರೆಸ್‌ ಸಂಸತ್ತು ಅಧಿವೇಶನದ ಕಲಾಪಗಳಿಗೆ ಅಡ್ಡಿಪಡಿಸುವುದನ್ನೇ ಒಂದು ಛಾಳಿಯಾಗಿ ಮಾಡಿಕೊಂಡಿದೆ. ಸುಗಮವಾಗಿ ನಡೆಯುವ ಸಂಸತ್‌ ಅಧಿವೇಶನವನ್ನು ಹೈಜಾಕ್‌ ಮಾಡುವ ಮೂಲಕ ಸಂವಿಧಾನಕ್ಕೆ ಅಗೌರವ ತೋರಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಇಂದು ಮಾಧ್ಯಮದ ಜತೆಗೆ ನಡೆದ “ಸಂಸದರೊಂದಿಗೆ ಸಂಸತ್ತಿನ ಸಂವಾದ”ದಲ್ಲಿ ಮಾತನಾಡಿದ ಅವರು, ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಕುರಿತಂತೆ ಕಲಾಪದಲ್ಲಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಜತೆಗೆ, ದಕ್ಷಿಣ...
ಉಡುಪಿರಾಜಕೀಯಸುದ್ದಿ

ಕೊರಗ ಸಮುದಾಯದ 10 ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಅದೇಶ ಪತ್ರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ-ಕಹಳೆ ನ್ಯೂಸ್

ಉಡುಪಿ: ರಾಜೀವ ಗಾಂಧಿ ವಸತಿ ನಿಗಮದಿಂದ ಕೊರಗ ಸಮುದಾಯದ 10 ಫಲಾನುಭವಿಗಳಿಗೆ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಜೂರಾದ ಮನೆ ಮಂಜೂರಾತಿ ಮತ್ತು ಕಾಮಗಾರಿ ಅದೇಶ ಪತ್ರವನ್ನು ಇಂದು ದಿನಾಂಕ 24-12-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಹಿರಿಯಡಕ ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ, ಬೈರಂಪಳ್ಳಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಂಧನಕ್ಕೊಳಗಾಗಿದ್ದ ಸಿ. ಟಿ. ರವಿಗೆ ಬಿಗ್‌ ರಿಲೀಫ್‌ ; ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ತಕ್ಷಣವೇ ಸಿ.ಟಿ.ರವಿ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ನೇತೃತ್ವದ ಪೀಠವು ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡಿ. ಸಿ.ಟಿ.ರವಿ ಈಗ ಎಲ್ಲಿದ್ದಾರೋ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಮಧ್ಯಂತರ ಆದೇಶ ನೀಡಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸಬೇಕು ಎಂದು ಸಿ.ಟಿ.ರವಿಗೆ...
ಕ್ರೈಮ್ಬೆಳಗಾವಿರಾಜಕೀಯರಾಜ್ಯಸುದ್ದಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪ ಎಂಎಲ್‌ಸಿ ಸಿ.ಟಿ.ರವಿ ಬಂಧನ – ಕಹಳೆ ನ್ಯೂಸ್

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ ಅವರನ್ನು ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಂಧನ ಖಂಡಿಸಿ ಪೊಲೀಸ್ ವ್ಯಾನ್ ಹತ್ತಿ ಬಿಜೆಪಿ ಶಾಸಕರು ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು....
ಬೆಳಗಾವಿರಾಜಕೀಯರಾಜ್ಯಸುದ್ದಿ

ಬೋರ್‌ವೆಲ್‌ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ, ದಂಡ ; ಬೆಳಗಾವಿ ಅಧಿವೇಶನದಲ್ಲಿ ಬಿಲ್ ಪಾಸ್ – ಕಹಳೆ ನ್ಯೂಸ್

ಬೆಳಗಾವಿ, ಡಿ.17 : ಕಾರ್ಯನಿರ್ವಹಿಸದ ಅಥವಾ ಸ್ಥಗಿತಗೊಂಡ ಕೊಳವೆಬಾವಿ ಮುಚ್ಚದ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8 ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ದುರಂತಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಅವರು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024...
ದೆಹಲಿರಾಜಕೀಯಸುದ್ದಿ

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು-ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಥುರಾ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್.ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಡ್ವಾಣಿ 2002 ರಿಂದ 2004 ರವರೆಗೆ ಭಾರತದ ಉಪ ಪ್ರಧಾನಿಯಾಗಿ ಮತ್ತು 1999 ರಿಂದ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು....
ಉಡುಪಿಕಾಪುಕುಂದಾಪುರರಾಜಕೀಯಸುದ್ದಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದ ಉಡುಪಿ, ಕುಂದಾಪುರ,ಹಾಗೂ ಕಾಪು ಶಾಸಕರು- ಕಹಳೆ ನ್ಯೂಸ್

ಬೆಳಗಾವಿಯ ಸುವರ್ಣ ಸೌಧದಲ್ಲಿ ಉಡುಪಿ ಜಿಲ್ಲೆಯ ಶಾಸಕ ಮಿತ್ರರು, ಹಿರಿಯರೂ ಆದ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಲಾಯಿತು. ಭೇಟಿಯ ವೇಳೆ ಕಳೆದ ಹಲವು ತಿಂಗಳುಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು, ಶಿಲೆ ಕಲ್ಲು ಹಾಗೂ ಮರಳು ಸಿಗದೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುತ್ತೂರು ನಗರಸಭಾ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಪೋಸ್ಟ್ : ಅದ್ದು ಪಡೀಲ್ ಅಂದರ್..!!! – ಕಹಳೆ ನ್ಯೂಸ್

ಪುತ್ತೂರು : ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಬರೆದು ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವಾಟ್ಸಾಪ್ ಗ್ರೂಪ್ ಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಅದ್ದು ಪಡೀಲ್ ವಿರುದ್ಧ ನಗರ ಪೊಲೀಸರಿಗೆ ಬಿಜೆಪಿ ನಿಯೋಗ ದೂರು ನೀಡಿದ್ದು ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠoದೂರು ಆಕ್ರೋಶ ಹೊರಹಾಕಿದ್ದರು. ಇದೀಗ ಪೋಸ್ಟ್ ಹಾಕಿದ್ದ ಅದ್ದು ಪಡೀಲ್ ನನ್ನು ಪೊಲೀಸರು...
1 6 7 8 9 10 232
Page 8 of 232