Thursday, July 23, 2026

ರಾಜಕೀಯ

ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಉಳ್ಳಾಲ : ‘ನಾನು ಮಾಡುವ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ’ ; ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ – ಕಹಳೆ ನ್ಯೂಸ್

ಉಳ್ಳಾಲ, ನ.29 : ನಾನು ಮಾಡುವ ಯಾವುದೇ ಅಭಿವೃದ್ಧಿ ಕೆಲಸ ಓಟಿಗಾಗಿ ಅಲ್ಲ, ಮುಂದಿನ ತಲೆಮಾರಿಗಾಗಿ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿಯ ವಿಚಾರ ಬಂದಾಗ ಯಾವುದೇ ರಾಜಿಯಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ತೊಕ್ಕೊಟ್ಟಿನಿಂದ ಚೆಂಬುಗುಡ್ಡೆವರೆಗೆ ಹಾಗೂ ಅಸೈಗೋಳಿಯಿಂದ ನಡುಪದವು ತನಕ ನಿರ್ಮಾಣ ಆಗಲಿರುವ ಚತುಷ್ಪಥ ರಸ್ತೆ ಕಾಮಗಾರಿಗೆ ತೊಕ್ಕೊಟ್ಟಿನಲ್ಲಿ ಶಂಕು ಸ್ಥಾಪನಾ ಕಾರ್ಯಕ್ರಮ ನಡೆಯಿತು. ಈ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಷ್ಟು ವರ್ಷ ಯಾವುದೇ ವ್ಯಾಪಾರಿಗಳಿಗೆ...
ಮುಂಬೈರಾಜಕೀಯಸುದ್ದಿ

ದೇವೇಂದ್ರ ಫಡ್ನವೀಸ್ ಗೆ ಮಹಾರಾಷ್ಟ್ರ ಸಿಎಂ ಹುದ್ದೆ ಬಹುತೇಕ ಖಚಿತ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ನಾಯಕತ್ವದ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಏಕನಾಥ್ ಶಿಂಧೆ ಅವರು ಸ್ಪಷ್ಟವಾಗಿ ಹೇಳಿರುವ ಮೂಲಕ, ದೇವೇಂದ್ರ ಫಡ್ನವೀಸ್ ಅವರಿಗೆ ಮುಖ್ಯಮಂತ್ರಿ ಪಟ್ಟ ನೀಡಲು ಇದ್ದ ಗೊಂದಲ ನಿವಾರಣೆಯಾಗಿದೆ. ಆದರೂ ಬಿಜೆಪಿ ಇತರ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ 288ರಲ್ಲಿ 132 ಸ್ಥಾನಗಳನ್ನು ಪಡೆದು ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮಹಾಯುತಿ ಮೈತ್ರಿಕೂಟ 230 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೂ ಏಕನಾಥ್ ಶಿಂಧೆ ಅವರನ್ನು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು ಎಂದಿದ್ದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ – ಕಹಳೆ ನ್ಯೂಸ್

ಬೆಂಗಳೂರು: ಮುಸ್ಲಿಮರಿಗೆ (Muslims) ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಕರೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ (Vokkaliga seer Chandrashekar Swamiji ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೈಯ್ಯದ್‌ ಅಬ್ಬಾಸ್‌ ಎಂಬವರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು ಬಿಎನ್‌ಎಸ್‌ ಸೆಕ್ಷನ್‌ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ...
ಮುಂಬೈರಾಜಕೀಯರಾಷ್ಟ್ರೀಯಸುದ್ದಿ

ಮಹಾರಾಷ್ಟ್ರದ ಮುಂದಿನ ಸಿಎಂ ಯಾರು..? ಅಮಿತ್ ಶಾ ನಿವಾಸದಲ್ಲಿ ಮಹಾಯುತಿ ನಾಯಕರ ಮಹತ್ವದ ಸಭೆ – ಕಹಳೆ ನ್ಯೂಸ್

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಿರುವ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಭಾರೀ ಕುತೂಹಲ ಮೂಡಿದೆ. ಶಿವಸೇನೆ ನಾಯಕ ಏಕನಾಥ್ ಶಿಂಧೆ, ಮಹಾರಾಷ್ಟ್ರದ ಮುಂದಿನ ಸಿಎಂ ಎಂದು ಬಿಂಬಿತವಾಗಿರುವ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ತೆರಳಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದರು. ಬಿಜೆಪಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ ಶಿಕ್ಷಕಿ..! – ಕಹಳೆ ನ್ಯೂಸ್

ಬೆಂಗಳೂರು: ಶಿಕ್ಷಕಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಬಿಜಿಎಸ್ ಬ್ಲೂಮ್‌ಫೀಲ್ಡ್ ಶಾಲೆಯಲ್ಲಿ 75ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದಾನೆ ಎಂದು 38 ವರ್ಷದ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ನಾಯ್ಡು ಶಾಲೆಯ ಅಧ್ಯಕ್ಷರಾಗಿದ್ದು 2021ರ ಮಾರ್ಚ್ 1ರಿಂದ 2023ರ ಆಗಸ್ಟ್ 15ರವರೆಗೂ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿವಿ ಸದಾನಂದ ಗೌಡ ಬಣ್ಣ ಬಯಲು ಮಾಡ್ತೀನಿ, ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ : ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ – ಕಹಳೆ ನ್ಯೂಸ್

ವಿಜಯಪುರ : ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದೀರಿ, ನಿಮ್ಮ ಬಣ್ಣ ಬಯಲು ಮಾಡ್ತೀನಿ, ಇಲ್ಲವಾದರೆ ಧರ್ಮಸ್ಥಳಕ್ಕೆ ಬಂದು ಆಣೆಪ್ರಮಾಣ ಮಾಡಲಿ ಎಂದು ಡಿವಿಎಸ್‌ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಎಸೆದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು. ಇಲ್ಲದೆ ಹೋದರೆ ಬಂಡವಾಳ ಬಯಲು ಮಾಡುತ್ತೇನೆ. ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ. ಸದಾನಂದಗೌಡ ಯಾಕೆ ಗಾಬರಿಯಾಗಬೇಕು? ನೀವು ಗಾಬರಿಯಾಗಬೇಡಿ. ನಾಗರಹಾವು-ಎರೆಹುಳ ಎತ್ತನಿಂದೆತ್ತ ಸಂಬಂಧವಯ್ಯ ಸದಾನಂದ....
ರಾಜಕೀಯರಾಜ್ಯಸುದ್ದಿ

ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ : ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ವಾಗ್ದಾಳಿ – ಕಹಳೆ ನ್ಯೂಸ್

– ರಾಜ್ಯ ಬಿಜೆಪಿ ಭಿನ್ನಮತ ಕೈಮೀರಿ ಹೋಗಿದೆ – ಇಗೋ ಸಮಸ್ಯೆಯಿಂದ ಪಕ್ಷಕ್ಕೆ ಭಾರೀ ಹಾನಿ ಬೆಂಗಳೂರು: ಕಾಂಗ್ರೆಸ್‌ನವರು (Congress) ಚಿನ್ನದ ಬಟ್ಟಲುಗಳಿಂದ ವಿಷಯಗಳನ್ನು ಕೊಡುತ್ತಿದ್ದರೂ ನಮ್ಮವರು ತೆಗೆದುಕೊಳ್ಳಲು ಆಗುತ್ತಿಲ್ಲ. ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ (DV Sadananda Gowda) ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ (BJP) ಆಂತರಿಕ ಜಗಳವೇ ಆಯ್ತು.ಇವರಿಂದ ಸರ್ಕಾರವನ್ನು ಏನು ಮಾಡಲು ಸಾಧ್ಯವಿಲ್ಲ ಎಂದು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದಲ್ಲೂ ಮಾಜಿ ಸಂಸದನಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಸೇರಿದಂತೆ...
1 7 8 9 10 11 232
Page 9 of 232