Friday, July 24, 2026

ಕಾಪು

ಕಾಪುಸುದ್ದಿ

ಬೀಚ್ ಬಳಿ ಬೈಕ್, ಮೊಬೈಲ್ ಬಿಟ್ಟು ಯುವಕ ನಾಪತ್ತೆ –ಕಹಳೆ ನ್ಯೂಸ್

ಕಾಪು : ಕಾಪು ಬೀಚ್ ಬಳಿ ಯುವಕನೋರ್ವ ಬೈಕ್, ಮೊಬೈಲ್ ಇಟ್ಟು ನಾಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ನಾಪತ್ತೆಯಾದ ಯುವಕ. ಈತ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದು ಶುಕ್ರವಾರ ಬೆಳಿಗ್ಗೆ ಕಾಪು ಬೀಚ್ ಬಳಿ ಬೈಕ್, ಬೆಲೆಬಾಳುವ ಫೋನ್, ನಗದು ಸಹಿತವಾಗಿ ಪರ್ಸ್ ಪತ್ತೆಯಾಗಿದೆ.‌ ಮನೆಯವರು ಮತ್ತು ಸ್ಥಳೀಯರು ಕಾಪು ಬೀಚ್ ಬಳಿ, ಸಮುದ್ರ ತೀರ ಮತ್ತು...
ಕಾಪುದಕ್ಷಿಣ ಕನ್ನಡಸುದ್ದಿ

“ಕಾಪು ತಾಲ್ಲೂಕು ಕಚೇರಿಯಲ್ಲಿ ಪರಿಸರ ದಿನ ಆಚರಣೆ ಪರಿಸರವೇ ನಮ್ಮ ಉಸಿರು; ಗಿಡಮರಗಳೇ ನೀವಿದ್ದರೆ ಮಾತ್ರ ನಾವು -ತಹಶಿಲ್ದಾರ್ ಪ್ರತಿಭಾ ಆರ್.-ಕಹಳೆ ನ್ಯೂಸ್

ಕಾಪು :ಈ ದಿನ ತಾಲ್ಲೂಕು ಕಚೇರಿಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.ತಹಶಿಲ್ದಾರ್ ಪ್ರತಿಭಾ ಆರ್ ಮತ್ತು ಪುರಸಭೆ ಮುಖ್ಯ ಅಧಿಕಾರಿ ನಾಗರಾಜ್ ರವರು ಉಪಸ್ಥಿತರಿದ್ದು ಸ್ವತಃ ಗಿಡ ನೆಟ್ಟು ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ತಹಶಿಲ್ದಾರ್ ಕಚೇರಿಯ ಉಪ ತಹಶಿಲ್ದಾರ್ ಗಳಾದ ರವಿಕಿರಣ್, ದೇವಕಿ, ಅಶೋಕ್ ಕೋಟೆಕಾರ್ ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದರು.ತಹಶಿಲ್ದಾರ್ ಕಚೇರಿಯ ಆವರಣದಲ್ಲಿ ಉದ್ಯಾನವನ ನಿರ್ಮಿಸಿ ಸೌಂದರ್ಯೀಕರಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ತಹಶಿಲ್ದಾರ್ ಪ್ರತಿಭಾ ಆರ್...
ಕಾಪುಕ್ರೈಮ್ಸುದ್ದಿ

ಕಾಪು : ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ 6 ಮಂದಿಯನ್ನು ವಶಕ್ಕೆ ಪಡೆದ ಕಾಪು ಪೊಲೀಸರು-ಕಹಳೆ ನ್ಯೂಸ್

ಉಡುಪಿ : ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ತಂಡವೊಂದನ್ನು ಕಾಪು ಪೊಲೀಸರು ಬಂದಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಪರಂಗಿಪೇಟೆ ಎಂಬವರನ್ನು ಬಂದಿಸಿದ್ದಾರೆ. ಇವರಲ್ಲಿ ಕೆಲವರು ಬೇರೆ ಬೇರೆ ಠಾಣೆಗಳಲ್ಲಿ ರೌಡಿ ಶೀಟರ್ ಹೊಂದಿದವರಾಗಿದ್ದಾರೆ. ಉಡುಪಿಯಿಂದ ಕಾಪು‌ ಕಡೆಗೆ ಬರುತ್ತಿದ್ದ...
ಕಾಪುಸುದ್ದಿ

ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಯೋಗೀಶ್ ಎಸ್. ಕೋಟ್ಯಾನ್ ಗ್ರಾಮ ಪಂಚಾಯತ್ ಸದಸ್ಯರು ಉದ್ಯಾವರ ಇವರ ವತಿಯಿಂದ "ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ" ಉದ್ಯಾವರ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಾಂಕೇತಿಕವಾಗಿ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ...
ಕಾಪುಶಿಕ್ಷಣಸುದ್ದಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯ 2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಕಾಪು : ಸರಸ್ವತಿ ಮಂದಿರ ಶಾಲೆ, ಉಚ್ಚಿಲ ಇದರ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್, ಶಿಲ್ಪಾ ಜಿ ಸುವರ್ಣ, ಶಾಲಾ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು....
ಉಡುಪಿಕಾಪುಕ್ರೈಮ್ರಾಜ್ಯಸುದ್ದಿ

ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು ; ನ್ಯಾಯಾಲಯದ ಮುಂದೆ ಶರಣಾದ ಪಾಂಗಾಳ ಮಂಡೇಡಿಯ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್‌ – ಕಹಳೆ ನ್ಯೂಸ್

ಕಾಪು: ಕಳೆದ ವರ್ಷ ಫೆ. 5ರಂದು ಪಾಂಗಾಳದಲ್ಲಿ ಡ್ರ್ಯಾಗನ್‌ ಇರಿತಕ್ಕೊಳಗಾಗಿ ಹತ್ಯೆಗೀಡಾಗಿದ್ದ ಪಾಂಗಾಳ ಮಂಡೇಡಿಯ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯೋಗೀಶ್‌ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. ಇದೊಂದಿಗೆ ವರ್ಷದ ಹಿಂದೆ ದೈವದ ಕಾರ್ಣಿಕ ನುಡಿ ನಿಜವಾಗಿದೆ.   ಶರತ್‌ ಶೆಟ್ಟಿ ಕೊಲೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿರುವಂತೆಯೇ ಮನೆಯವರು ಕುಟುಂಬದ ದೈವದ ಮೊರೆ ಹೋಗಿದ್ದರು. "ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ...
ಕಾಪುದಕ್ಷಿಣ ಕನ್ನಡರಾಜಕೀಯಸುದ್ದಿ

ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಸಂಬAಧ ಕಾಪು ಮಂಡಲ ಘಟನಾಯಕರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು :ಜೂನ್ 03 ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಸಂಬAಧ ಇಂದು ದಿನಾಂಕ 25-05-2024 ರಂದು ಕಾಪು ಮಂಡಲ ಬಿಜೆಪಿ ಕಚೇರಿಗೆ ನೈರುತ್ಯ ಪದವೀಧರ ಕ್ಷೇತ್ರ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾಗಿರುವ ಭೋಜೇಗೌಡ ಅವರು ಕಾಪು ಮಂಡಲ ಬಿಜೆಪಿ ಕಚೇರಿ ಭೇಟಿ ನೀಡಿ ಘಟನಾಯಕರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ...
ಉಡುಪಿಕಾಪುಸುದ್ದಿ

ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಪೂರ್ವ ಸಿದ್ಧತಾ ಸಭೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2024 ನೈಋತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಯ ಜೂನ್ 03 ರಂದು ನಡೆಯಲಿದ್ದು,ಇದರ ಪೂರ್ವಭಾವಿಯಾಗಿ  ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪದವೀಧರ ಕ್ಷೇತ್ರ ಮತ್ತು ಶಿಕ್ಷಕ ಕ್ಷೇತ್ರದ ಮತದಾರರನ್ನು ಸಂಪರ್ಕಿಸಬೇಕು ಮತ್ತು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಗರಿಷ್ಠ...
1 9 10 11 12 13
Page 11 of 13