Friday, April 24, 2026

ಕಾಪು

ಕಾಪುಸುದ್ದಿ

ಹೆಜಮಾಡಿ ಕರಾವಳಿ ಯುವಕ – ಯುವತಿ ವೃಂದದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ- ಕಹಳೆ ನ್ಯೂಸ್

ಕರಾವಳಿ ಯುವಕ - ಯುವತಿ ವೃಂದ (ರಿ.) ಹೆಜಮಾಡಿ ಇವರ ವತಿಯಿಂದ ಹೆಜಮಾಡಿ ಬಸ್ ನಿಲ್ದಾಣ ಬಳಿ ಹಮ್ಮಿಕೊಳ್ಳಲಾದ "ವನಮಹೋತ್ಸವ - 2024" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರಾವಳಿ ಯವಕ ವೃಂದದ ಅಧ್ಯಕ್ಷರಾದ ಅಶೋಕ್ ವಿ.ಕೆ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಕರ್ನಾಟಕ ವಿದ್ಯುತ್ ನಿಗಮದ ನಿವೃತ್ತ...
ಕಾಪುಸುದ್ದಿ

ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ- ಕಹಳೆ ನ್ಯೂಸ್

ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನಕ್ಕೆ ಇಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ ನೀಡಿದರು. 2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ ಟಿ20 ವಿಶ್ವಕಪ್ ಗೆಲುವಿಗೆ ಕಾರಣಿಕರ್ತರಾದ ಸೂರ್ಯ ಕುಮಾರ್ ಯಾದವ್ ಅವರನ್ನು ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅಭಿನಂದಿಸಿದರು....
ಕಾಪುಸುದ್ದಿ

ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ವತಿಯಿಂದ ಪ್ರಕಾಶಾಭಿನಂದನೆ ಕಾರ್ಯಕ್ರಮ:  ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ– ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾl ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ, ಪಡುಬಿದ್ರಿ ವತಿಯಿಂದ "ಪ್ರಕಾಶಾಭಿನಂದನೆ" ಕಾರ್ಯಕ್ರಮ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ...
ಉಡುಪಿಕಾಪುಸುದ್ದಿ

ಕಾಪು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಒನ್ ಬೂತ್ ಟೆನ್ ಯೂತ್ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಯುವ ಮೋರ್ಚಾ ವತಿಯಿಂದ ಕಾಪು ಮಂಡಲ ಬಿಜೆಪಿ ಕಛೇರಿಯಲ್ಲಿ ಹಮ್ಮಿಕೊಳ್ಳಲಾದ "ಒನ್ ಬೂತ್ ಟೆನ್ ಯೂತ್" ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಯುವ ಮೋರ್ಚಾ ಕಾರ್ಯಕರ್ತರನ್ನು ಉದ್ದೇಶಿಸಿ ಶಾಸಕರು ಮಾತನಾಡಿ ಪಕ್ಷ ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ...
ಉಡುಪಿಕಾಪುಸುದ್ದಿ

ತಾಯಿ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾಪು : ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸ್ಮರಣೆಯ ಅಂಗವಾಗಿ "ತಾಯಿಯ ಹೆಸರಿನಲ್ಲಿ ಒಂದು ಗಿಡ" ನೆಡುವ ಅಭಿಯಾನದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತನ್ನ ತಾಯಿ ಪದ್ಮಾವತಿ ಅವರ ಹೆಸರಿನಲ್ಲಿ ಕಾಪುವಿನ ಕಲ್ಕುಡ ದೈವಸ್ಥಾನದ ಬಳಿ ಯುವಮೋರ್ಚದವರೊಂದಿಗೆ ಸೇರಿ ಗಿಡ ನೆಟ್ಟರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾಪು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ, ಬಿಜೆಪಿ...
ಉಡುಪಿಕಾಪುಸುದ್ದಿ

ಕಾಪು :ಇನ್ನಂಜೆ ಪಂಚಾಯತ್ ವ್ಯಾಪ್ತಿಯಲ್ಲಿ 500ಗಿಡಗಳನ್ನು ನೆಟ್ಟು, 500ಗಿಡಗಳನ್ನು ನಾಗರೀಕರಿಗೆ ವಿತರಣೆ ಮಾಡಿ ಗಿಡಗಳ ಸಂಭ್ರಮ ಆಚರಣೆ ಕಾರ್ಯಕ್ರಮವನ್ನು ಆಸರೆ ಹಿರಿಯ ನಾಗರೀಕರ ಮನೆಯಲ್ಲಿ ಆಚರಿಸಲಾಯಿತು-ಕಹಳೆ ನ್ಯೂಸ್

ಕಾಪು : ತಾನು ಆಹಾರ ತಿಂದರೆ ಗಿಡಗಳಿಗೂ ಆಹಾರ ನೀಡುವೆ, ತಾನು ಈ ವರೆಗೆ ಸೇವೆ ಮಾಡಿ ಸಾಕಿದ 200 ಹಿರಿಯ ನಾಗರೀಕರಂತೆ ತನ್ನ ಸುತ್ತ ಮುತ್ತ ನೆಟ್ಟಿರುವ 500 ಗಿಡಗಳನ್ನು ಸಾಕುವೆ ನೀವು ಯಾವಾಗ ಬೇಕಾದರೂ ಬಂದುಕೇಳಿ ನಾನು ಬದುಕಿದ್ದರೆ ಗಿಡಗಳು ಬದುಕಿರುತ್ತವೆ ಎಂದು 500 ಗಿಡಗಳನ್ನು ನೆಡುವ ಮತ್ತು ಸಾಕುವ ಜವಾಬ್ದಾರಿ ತೆಗೆದುಕೊಂಡ ಪಾಂಗಳ ಗುಡ್ಡೆ ಆಸರೆ ಎಂಬ ಹಿರಿಯ ನಾಗರೀಕರ ಮನೆಯ ಪೆನ್ ವೆಲ್ ಸೋನ್ಸ್...
ಕಾಪುಸುದ್ದಿ

ಕಾಪು : “ನಮ್ ಬೋಟ್ ರೆಡಿ ಇದೆ, ಭಯ ಬೇಡ, ನಿಮ್ಮೊಂದಿಗೆ ನಾವಿದ್ದೇವೆ”: ತಹಶಿಲ್ದಾರ್ ಪ್ರತಿಭಾ ಆರ್– ಕಹಳೆ ನ್ಯೂಸ್

ಕಾಪು ತಾಲ್ಲೂಕಿನಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತೆ ಮತ್ತು ರಕ್ಷಣಾ ಕಾರ್ಯಗಳ ಸಿದ್ದತೆಯೂ ಚುರುಕಾಗಿದೆ. ಪಡುಬಿದ್ರೆಯ ಸರ್ಕಾರಿ ಶಾಲೆಯಲ್ಲಿ ಬೋಟ್, ಲೈಫ್ ಜಾಕೆಟ್, ಗಾಳಿ ಟ್ಯೂಬ್ ಇತ್ಯಾದಿ ಪರಿಕರಗಳನ್ನು ಸಿದ್ದವಾಗಿಟ್ಟುಕೊಳ್ಳಲಾಗಿದೆ ಎಂದು ತಹಶಿಲ್ದಾರ್ ಡಾ. ಪ್ರತಿಭಾ ಆರ್ ತಿಳಿಸಿದ್ದಾರೆ. ಗೃಹರಕ್ಷಕ ದಳದ ಸಿಬ್ಬಂದಿಗಳಾದ ಕುಮಾರ್ ಕೋಟ್ಯಾನ್, ಮಹೇಶ್, ನವೀನ್ ಕುಮಾರ್, ಸುಕೇಶ್, ಕೇಶವ್ ಸುಬ್ರಹ್ಮಣ್ಯ ರವರು 24/7 ಕರ್ತವ್ಯದಲ್ಲಿ ಇರುತ್ತಾರೆ. ನೆರೆ ಉಂಟಾದ ಸಂದರ್ಭದಲ್ಲಿ ತಹಶಿಲ್ದಾರ್ ಕಚೇರಿಯ ಕಂಟ್ರೋಲ್ ರೂಮ್...
ಕಾಪುಸುದ್ದಿ

ಕಾಪು ಹೊಸ ಮಾರಿಗುಡಿ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಚಾಲನೆ -ಕಹಳೆ ನ್ಯೂಸ್

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮಾರಿಗುಡಿ ಅಭಿವೃದ್ಧಿ ಸಮಿತಿ ಮತ್ತು ಸ್ವರ್ಣ ಸಮರ್ಪಣಾ ಸಮಿತಿ ನೇತೃತ್ವದಲ್ಲಿ ಪ್ರಪಂಚದಾದ್ಯಂತ ನೆಲೆಸಿರುವ ಸಮಸ್ತ ಭಕ್ತರಿಂದ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಚಾಲನೆ ನೀಡಲಾಯಿತು. ದೇಗುಲದ ತಂತ್ರಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿ ಕೊರಂಗ್ರಪಾಡಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಉಪಸ್ಥಿತಿಯಲ್ಲಿ ಸ್ವರ್ಣ ಗೌರಿ ಪೂಜೆಯೊಂದಿಗೆ...
1 6 7 8 9 10 12
Page 8 of 12