Saturday, March 7, 2026

ಬೈಂದೂರು

ಉಡುಪಿಬೈಂದೂರುಸುದ್ದಿ

ವಿಶೇಷ ಚೇತನ ಮಗವನ್ನು ಎತ್ತಿಕೊಂಡು ಹೊಳೆ ದಾಟಿದ ತಂದೆ; ವಿಡಿಯೋ ವೈರಲ್ ; ಶಾಶ್ವತ ವ್ಯವಸ್ಥೆ ರೂಪಿಸಲು ಯೋಜನೆ ಸಿದ್ಧಪಡಿಸಲಾಗುವುದು: ಶಾಸಕ ಗಂಟಿಹೊಳೆ –ಕಹಳೆ ನ್ಯೂಸ್

ಉಡುಪಿ : ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿ ಎಂಬಲ್ಲಿ ಸೇತುವೆ ಇಲ್ಲದ ಕಾರಣ ಶಾಲೆಗೆ ಹೋಗುವ ಮಕ್ಕಳನ್ನು ಪೋಷಕರೇ ಎತ್ತಿಕೊಂಡು ಹೊಳೆ ದಾಟಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದೇ ರೀತಿ ತಂದೆಯೊಬ್ಬರು ತನ್ನ ವಿಶೇಷ ಚೇತನ ಮಗುವನ್ನು ಹೆಗಲ ಮೇಲೆ ಕೂರಿಸಿ ಹೊಳೆ ದಾಟುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಬೈಂದೂರು ತಾಲೂಕಿನಲ್ಲಿ ಜನರು ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾಕಷ್ಟು...
ಬೈಂದೂರುಸುದ್ದಿ

ರಾಹುಲ್ ಗಾಂಧಿ ವಿರುದ್ಧ ಬೈಂದೂರು ಯುವಮೋರ್ಚಾ ಬೃಹತ್ ಪ್ರತಿಭಟನೆ : ಹಿಂದು ಹಿಂಸವಾದಿ ಹೇಳಿಕೆ ಖಂಡನೆ, ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹ-ಕಹಳೆ ನ್ಯೂಸ್

ತ್ರಾಸಿ : ಹಿಂದುಗಳು ಹಿಂಸವಾದಿಗಳು, ಅಸತ್ಯ ನುಡಿಯುತ್ತಾರೆ ಎಂಬಿತ್ಯಾದಿ ಹಿಂದೂ ವಿರೋಧಿ ಹೇಳಿಕೆ ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯು ಸಂಸತ್ ಭವನದಲ್ಲಿ ಮಾಡಿರುವ ಭಾಷಣ ಖಂಡಿಸಿ, ರಾಜೀನಾಮೆಗೆ ಆಗ್ರಹಿಸಿ ಬೈಂದೂರು ಮಂಡಲ ಯುವಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ತ್ರಾಸಿಯ ಹೆದ್ದಾರಿ ಸಮೀಪ ನಡೆಯಿತು. ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಹಿಂದೂ ಧರ್ಮ ಎಂದರೆ ಹಿಂಸಾವಾದಿಗಳು, ಹಿಂದುಗಳೆಂದರೆ ಅಸತ್ಯ ನುಡಿಯುವವರು, ಹಿಂದುಗಳೆಂದರೆ ಅಸತ್ಯ ಹಿಂದುಗಳೆಂದರೆ ದೊಂಬಿ...
ಉಡುಪಿಬೈಂದೂರುಸುದ್ದಿ

ಆಸ್ಪತ್ರೆ ಕಟ್ಟಡ, ಮೂಲಸೌಕರ್ಯ, ಜಾಗದ ಕೊರತೆ ನೀಗಿಸಲು ಶಾಸಕ ಗುರುರಾಜ್ ಗಂಟಿಹೊಳೆ ಅಧಿಕಾರಿಗಳಿಗೆ ಸೂಚನೆ-ಕಹಳೆ ನ್ಯೂಸ್

  ಬೈಂದೂರು: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲೆಡೆ ಅಗತ್ಯ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ ಸಾರ್ವಜನಿಕವಾಗಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ನಿರ್ದೇಶನ ನೀಡಿದರು. ಉಪ್ಪುಂದದ ಕಾರ್ಯಕರ್ತ ಕಛೇರಿಯಲ್ಲಿ ಆರೋಗ್ಯ & ಆಯುಷ್ ಇಲಾಖೆ ವೈದ್ಯಾಧಿಕಾರಿಗಳು, ಕಂದಾಯ & ಸರ್ವೇ ಇಲಾಖೆ ಹಾಗೂ ಬಿಎಸ್ಎನ್ಎಲ್ ಮತ್ತು ಕೆಪಿಸಿಎಲ್ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ...
ಬೈಂದೂರುಸುದ್ದಿ

ಮಳೆಗಾಲದ ತುರ್ತು ಸ್ಪಂದನೆಗೆ ಎರಡು ತಂಡ ಸಿದ್ಧ :ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಮುಂದಾಳತ್ವದಲ್ಲಿ ಈ ತಂಡ ಕಾರ್ಯಾಚರಣೆ-ಕಹಳೆ ನ್ಯೂಸ್

ಬೈಂದೂರು: ಮಳೆಗಾಲದಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಜಿಲ್ಲಾ ವಿಪತ್ತು‌‌ ನಿರ್ವಹಣ ಪ್ರಾಧಿಕಾರದಿಂದ ಒಂದು ರೀತಿಯ ಸಿದ್ಧತೆ ಮಾಡಿಕೊಂಡಿದ್ದರೆ, ಬೈಂದೂರು ಕ್ಷೇತ್ರದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ವಿಶೇಷ ಮೇಲುಸ್ತುವಾರಿಯಲ್ಲಿ ಸಾರ್ವಜನಿಕ ತುರ್ತು ವಿಪತ್ತು ನಿರ್ವಹಣೆಗೆ ಎರಡು ತಂಡ ಗಳನ್ನು ರಚನೆ ಮಾಡಲಾಗಿದೆ. ಕ್ಷೇತ್ರದ ಕರಾವಳಿ ಭಾಗಕ್ಕೆ ಒಂದಕ್ಕೆ ತಂಡ ಹಾಗೂ ಮಲೆನಾಡು ಭಾಗಕ್ಕೆ ಒಂದು ತಂಡ ರಚನೆ ಮಾಡಲಾಗಿದೆ. ಪ್ರತಿ ತಂಡದಲ್ಲೂ ಹತ್ತು ಸದಸ್ಯರಿದ್ದು, ಮಳೆಗಾಲದಲ್ಲಿ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ...
ಬೈಂದೂರುಶಿಕ್ಷಣಸುದ್ದಿ

ಸಾಗರದಾಚೆಯೂ ಸರ್ಕಾರಿ ಶಾಲೆ ಅಭಿವೃದ್ಧಿ ಚಿಂತನೆ : ಶಾಸಕ ಗುರುರಾಜ್ ಗಂಟಿಹೊಳೆ ಅವರ ದುಬೈ ಪ್ರವಾಸದಲ್ಲೂ ಕ್ಷೇತ್ರ ಶಾಲೆಗಳ ದತ್ತು ಮಾತುಕತೆ- ಕಹಳೆ ನ್ಯೂಸ್

ಬೈಂದೂರು: ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸರ್ಕಾರಿ ಶಾಲೆಗಳ ಸೌಲಭ್ಯ ಸುಧಾರಣೆಗೆ ಈಗಾಗಲೇ ಸಮೃದ್ಧ ಬೈಂದೂರು ಪರಿಕಲ್ಪನೆಯಡಿ 300 ಟ್ರೀಸ್ ಕಾರ್ಯಕ್ರಮದ ಮೂಲಕ ಜಿಲ್ಲೆ, ರಾಜ್ಯ, ಹೊರ ರಾಜ್ಯಗಳ ದಾನಿಗಳು, ಸಂಸ್ಥೆಗಳಿಂದ ಕೊಡುಗೆ ಆಹ್ವಾನಿಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಸಾಗರದಾಚೆಗೂ ಸಹಾಯಹಸ್ತ ಕೋರುವ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ದುಬೈ ಪ್ರವಾಸದ ಸಂದರ್ಭದಲ್ಲಿ ಶಾಸಕರಾಗ ಗುರುರಾಜ್ ಗಂಟಿಹೊಳೆ ಅವರು ಅಲ್ಲಿ ನೆಲೆಸಿರುವ ಕ್ಷೇತ್ರದ, ಜಿಲ್ಲೆಯ ಬಂಧುಗಳೊಂದಿಗೆ ಮಾತುಕತೆ...
ಬೈಂದೂರುಶಿಕ್ಷಣಸುದ್ದಿ

ಸರ್ಕಾರಿ ಶಾಲೆ ಉಳಿದರೆ ಮಾತ್ರ ಶಾಶ್ವತ ಖುಷಿ: ಶಾಸಕ ಗುರುರಾಜ ಗಂಟಿಹೊಳೆ : ಸಮೃದ್ಧ ಬೈಂದೂರು 300 ಟ್ರೀಸ್ ಪರಿಕಲ್ಪನೆಯಡಿ 8 ಸರ್ಕಾರಿ ಶಾಲೆ, 2 ಅಂಗನವಾಡಿ ಕೇಂದ್ರದಲ್ಲಿ ಸ್ವಯಂಸ್ಫೂರ್ತಿ ಕೌಶಲ್ಯ ಕೇಂದ್ರ ಉದ್ಘಾಟನೆ– ಕಹಳೆ ನ್ಯೂಸ್

ಬೈಂದೂರು : ಸರ್ಕಾರಿ ಶಾಲೆ ಉಳಿದ ಮಾತ್ರ ನಮ್ಮ ಖುಷಿ, ನೆನಪು ಹಾಗೂ ಸುಮಧುರ ಬಾಂಧವ್ಯ ಶಾಶ್ವತವಾಗಿರಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ, ಸೂಕ್ತ ಸೌಲಭ್ಯ ಕಲ್ಪಿಸುವ ದೊಡ್ಡ ಕಾರ್ಯ ಆಗಬೇಕಿದೆ. ಹೀಗಾಗಿಯೇ 300 ಟ್ರೀಸ್ಸ್ ಕಲ್ಪನೆಯನ್ನು ಸಮೃದ್ಧ ಬೈಂದೂರು ಮೂಲಕ ಕಾರ್ಯರೂಪಕ್ಕೆ ತರಲಾಗಿದೆ. ಇದಕ್ಕೆ ದಾನಿಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಯ್ದ ಸರ್ಕಾರಿ ಶಾಲೆಗಳಲ್ಲಿ ಸ್ಫೂರ್ತಿ ಕೌಶಲ್ಯ ಕೇಂದ್ರ ತೆರೆಯಲು ಸ್ವಯಂ ಸ್ಫೂರ್ತಿ ಫೌಂಡೇಶನ್...
ಕುಂದಾಪುರಬೈಂದೂರುಶಿಕ್ಷಣಸುದ್ದಿ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಕುಂದಾಪುರ ಶಾಸಕ ಕಿರಣ್ ಕೊಡ್ಗಿಯವರಿಂದ ವಸತಿ ಶಾಲೆ ಕಾಮಗಾರಿ ಪರಿಶೀಲನೆ : ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಸೂಚನೆ- ಕಹಳೆ ನ್ಯೂಸ್

ಬೈಂದೂರು: ಸಿದ್ದಾಪುರದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾಗಾಂಧಿ ವಸತಿ ಶಾಲೆ ಹಾಗೂ ಸೌಡ ಅಗ್ರಹಾರದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಅಂಬೇಡ್ಕರ್ ವಸತಿ ಶಾಲೆಯ ಕಾಮಗಾರಿಯನ್ನು ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಒಟ್ಟಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದಷ್ಟು ಶೀಘ್ರವಾಗಿ ಕಾಮಗಾರಿ ನಡೆಸಿ, ವಿದ್ಯಾರ್ಥಿಗಳ ಅನುಕೂಲಕ್ಕೆ ಉಪಯೋಗ ಆಗುವಂತೆ ಮಾಡಬೇಕು. ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯೇ ಪ್ರಮುಖವಾಗಿದ್ದು ನಿರ್ಮಾಣ ಹಂತದಲ್ಲಿಯೇ ಇದಕ್ಕೆ ಆದ್ಯತೆ ನೀಡಬೇಕು....
ಬೈಂದೂರುಸುದ್ದಿ

ಶಾಸಕ ಗುರುರಾಜ ಗಂಟಿಹೊಳೆ ಅವರ ಮನವಿಗೆ ಸ್ಪಂದಿಸಿದ ಖಾಸಗಿ ಬಸ್ ಮಾಲಕರು : ಎಸ್.ವಿ.ಎಂ.ಎಸ್. ಬಸ್ ನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಬೈಂದೂರು-ಕೊಲ್ಲೂರು ರೂಟ್ ನಲ್ಲಿ ಉಚಿತ ಪ್ರಯಾಣ: ಬಸ್ ಮಾಲಕರ ನಿರ್ಧಾರಕ್ಕೆ ಶಾಸಕರ ಅಭಿನಂದನೆ- ಕಹಳೆ ನ್ಯೂಸ್

ಬೈಂದೂರು : ಹಲವೆಡೆ ಶಾಲಾ ಮಕ್ಕಳಿಗೆ ಬಸ್ ಸೇವೆ ಅಲಭ್ಯವಾಗುತ್ತಿರುವುದನ್ನು ಮನಗಂಡು ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಗಂಟಿಹೊಳೆಯವರು ಖಾಸಗಿ ಬಸ್ ಮಾಲಕರೊಂದಿಗೆ ಹೆಚ್ಚುವರಿ ಬಸ್ ಸೇವೆಗೂ ಮಾತುಕತೆ ನಡೆಸಿದ್ದರು ಮತ್ತು ಸರ್ಕಾರಿ ಬಸ್ ಸೇವೆ ಎಲ್ಲ ಕಡೆಗಳಿಗೂ ಒದಗಿಸುವಂತೆ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೂ ಸೂಚಿಸಿದ್ದರು. ಈ ಮಧ್ಯೆ ಶಾಸಕರ ಮನವಿಗೆ ಸ್ಪಂದಿಸಿ ಎಸ್.ವಿ.ಎಂ.ಎಸ್. ಬಸ್ ಮಾಲಕರು ಬೈಂದೂರಿನಿಂದ ಕೊಲ್ಲೂರು ಕಡೆಗೆ ಹೋಗುವ ಎಲ್ಲ ರೂಟ್ ಗಳಲ್ಲೂ ಸರ್ಕಾರಿ ಪ್ರಾಥಮಿಕ ಶಾಲೆ...
1 5 6 7 8 9 10
Page 7 of 10