Wednesday, July 29, 2026

ಮಂಗಳೂರು

ಜಿಲ್ಲೆಮಂಗಳೂರುಸುದ್ದಿ

ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ ನಿಲ್ಲಿಸಿದ್ದ ಬೈಕ್, 181 ಗ್ರಾಂ ಚೆನ್ನ, ಹತ್ತೂವರೆ ಲಕ್ಷ ನಗದು ಕಳವು – ಕಹಳೆ ನ್ಯೂಸ್

ಉಳ್ಳಾಲ : ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್‌ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು, 181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್, ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರು ವಾಸವಿದ್ದ ಅಂಬಿಕಾರೋಡ್ ಕಾಪಿಕಾಡಿನ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದ್ದು ಘಟನೆ ಇಂದು ಬೆಳಗ್ಗೆ ಬೆಳಕಿಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮನ್‍ನಲ್ಲಿ ಆತ್ಮಹತ್ಯೆ -ಕಹಳೆ ನ್ಯೂಸ್

ಮಂಗಳೂರು: ಕಳೆದ ಒಂದು ತಿಂಗಳಿಂದ ಪ್ರೇಯಸಿ ಮೆಸೇಜ್ ಹಾಗೂ ಕರೆಗೆ ಪ್ರತಿಕ್ರಿಯಿಸದೇ ಇದ್ದಿದ್ದಕ್ಕೆ ಮನನೊಂದು ಸೋಮೇಶ್ವರದ ಯುವಕನೊಬ್ಬ ಒಮನ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಈತ ಕಳೆದ ಒಂದೂವರೆ ವರ್ಷದಿಂದ ಒಮನ್‍ನ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು, ಮರಳಿ ಒಮನ್‍ಗೆ ತೆರಳಿದ್ದ. ಇತ್ತೀಚೆ ಪ್ರೀತಿಸುತ್ತಿದ್ದ ಯುವತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು – ಕಹಳೆ ನ್ಯೂಸ್

ಮಂಗಳೂರು: ಇಸ್ರೇಲ್ ಇರಾನ್ ಸಂಘರ್ಷದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ. ನಿಗದಿಯಾಗಿದ್ದ ಏರ್‌ ಇಂಡಿಯಾ, ಇಂಡಿಗೋ ವಿಮಾನಗಳ ಹಾರಾಟವನ್ನ ಹಠಾತ್‌ ರದ್ದುಗೊಳಿಸಲಾಗಿದೆ. ಪ್ರಮುಖವಾಗಿ ದುಬೈಗೆ ತೆರಳುವ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ. ವಿದೇಶಕ್ಕೆ ಪ್ರಯಾಣ ಮಾಡುವ ಪ್ರಯಾಣಿಕರು ಆಯಾ ವಿಮಾನ ಸಂಸ್ಥೆಗಳು ಖಚಿತಪಡಿಸಿದ ಬಳಿಕವಷ್ಟೇ ವಿಮಾನ ನಿಲ್ದಾಣಕ್ಕೆ ಆಗಮಿಸಿ ಎಂದು ವಿಮಾನ ನಿಲ್ದಾಣ ಪ್ರಾಧಿಕಾರಿಗಳು ಮನವಿ ಮಾಡಿವೆ. ಮಂಗಳೂರು ಏರ್‌ಪೋರ್ಟ್‌ನಿಂದ ರದ್ದಾದ ವಿಮಾನಗಳು –...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಆರು ಮಂದಿ ಅಂತರ್‌ರಾಜ್ಯ ಸೈಬರ್ ವಂಚಕರು ಅರೆಸ್ಟ್‌ – ಕಹಳೆ ನ್ಯೂಸ್

ಮಂಗಳೂರು: ಸ್ನೇಹಿತನ ಬ್ಯಾಂಕ್ ಖಾತೆಯನ್ನು ಪಡೆದು ಸೈಬರ್ ವಂಚನೆ ಪ್ರಕರಣಕ್ಕೆ ಬಳಸಿ ಬಳಿಕ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೈಬರ್‌ ಅಪರಾಧ ಠಾಣೆಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶದ ನೆಲ್ಲೂರಿನ ಶೇಖ್ ಕರೀಮುಲ್ಲಾ ಯಾನೆ ರಸೂಲ್ (27) ಮತ್ತು ಉತ್ಪಲ ಸಂತೋಷ್ ಕೃಷ್ಣ (35), ಕರ್ನೂಲಿನ ಬುಡಿದಿನ್ನೆ ವಂಶಿ ಯಾನೆ ಗುರು (21), ತೆಲಂಗಾಣದ ಪಂಡಿತಿ ಕ್ರಾಂತಿ ಕುಮಾರ್ (36), ಬುಡೆ ಶ್ರೀನಿವಾಸ (38) ಮತ್ತು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಫೆ.25ರ0ದು  ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಬೆಳ್ಳಿ ಮಹೋತ್ಸವ-ಕಹಳೆ ನ್ಯೂಸ್

ಮಂಗಳೂರು : ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಸ್ವಾಯತ್ತ) ತನ್ನ ಬೆಳ್ಳಿ ಮಹೋತ್ಸವ ಆಚರಣೆಗಳನ್ನು ಫೆಬ್ರವರಿ 25ರ ಬುಧವಾರ ಅಧಿಕೃತವಾಗಿ ಉದ್ಘಾಟಿಸಲು ಸಜ್ಜಾಗಿದೆ. ಉದ್ಘಾಟನಾ ಸಮಾರಂಭವು ಕಾಲೇಜು ಕ್ಯಾಂಪಸ್‌ನಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಇದಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ಸಂತ ಪಿಯೋ ಚಾಪೆಲ್‌ನಲ್ಲಿ ಯೂಕರಿಸ್ಟಿಕ್ ಆಚರಣೆ ಜರುಗಲಿದೆ. ಪತ್ರಿಕಾಗೋಷ್ಠಿ ಕರೆದು ಮಾತಾಡಿದ ಆಯೋಜಕರು, ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮುಖ್ಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅರ್ಕುಳದಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನಾ ಸಮಾರಂಭ : ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಮಂಗಳೂರು  : ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಕುಳ ತುಪ್ಪೆಕಲ್ಲಿನಲ್ಲಿ ಫೆ.7 ರಂದು ಜ್ಞಾನರತ್ನ ಸಾರ್ವಜನಿಕ ಗೃಂಥಾಲಯ ಮತ್ತು ಜ್ಞಾನರತ್ನ ಅಂಗನವಾಡಿ ಕೇಂದ್ರ ತುಪ್ಪೆಕಲ್ಲು ಇದರ ನೂತನ ಕಟ್ಟಡದ ಉದ್ಘಾಟನಾ ಕರ್ಯಕ್ರಮದಲ್ಲಿ, ಮಾನ್ಯ ಶಾಸಕರಾದ ಡಾ. ವೈ. ಭರತ್ ಶೆಟ್ಟಿಯವರು ಭಾಗವಹಿಸಿ ಶುಭ ಹಾರೈಸಿದರು. ನೂತನ ಸುಸಜ್ಜಿತ ಕಟ್ಟಡವನ್ನು ಧರ್ಮದರ್ಶಿಗಳಾದ ಅರ್ಕುಳಬೀಡು ವಜ್ರನಾಭ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಉಧ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್‌ ಅಧ್ಯಕ್ಷರು,ಸ್ಥಳೀಯ ಸದಸ್ಯರುಗಳು ಕಾರ್ಯಕರ್ತರು ,ಪ್ರಮುಖರು ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಜನರಿಗೆ ತೊಂದ್ರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತಾಡ್ತೀನಿ: ಡಿಕೆಶಿ – ಕಹಳೆ ನ್ಯೂಸ್

ಮಂಗಳೂರು: ಜನರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ನಮ್ಮನ್ನ ಯಾರೂ ಸಂಪರ್ಕ ಮಾಡಿಲ್ಲ. ಮೆಟ್ರೋ ಚೇರ್ಮನ್ ಆಗಿ ಕೇಂದ್ರ ಸರ್ಕಾರದ ಚೇರ್ಮನ್ ಇದ್ದಾರೆ. ಇವತ್ತು ಅಥವಾ ನಾಳೆ ಅವರ ಜೊತೆ ಮಾತನಾಡುತ್ತೇನೆ. ಜನರಿಗೆ ತೊಂದರೆ ಕೊಡೋಕೆ ಬಿಡಲ್ಲ. ಮೆಟ್ರೋ ದರ ಪರಿಷ್ಕರಣೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು  : ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ...
1 8 9 10 11 12 114
Page 10 of 114