Recent Posts

Sunday, April 26, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಏ.14ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಮಂಗಳೂರಿಗೆ : ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಮಂಗಳೂರು : ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏ.14ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಕ್ಷ ಚಟುವಟಿಕೆಗಳು ಭರದಿಂದ ಸಾಗಿವೆ....
ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ತುಳುನಾಡಿನ ಜಾನಪದ ಕ್ರೀಡೆ ಕಂಬಳದಲ್ಲಿ ಭಾರತೀಯ ವೈದ್ಯಕೀಯ ಸಂಘದ ಪ್ರವೇಶ : “ಮೂಳೂರು- ಅಡ್ಡೂರು” ಜೋಡುಕರೆ ಕಂಬಳದಲ್ಲಿ ಕರೆಗೆ ಇಳಿಯಲಿರುವ ವೈದ್ಯಕೀಯ ಸಂಘದ ಕೋಣಗಳು- ಕಹಳೆ ನ್ಯೂಸ್

ಮಂಗಳೂರು : ಭಾರತೀಯ ವೈದ್ಯಕೀಯ ಸಂಘ (ರಿ) ಮಂಗಳೂರು ಪ್ರಪ್ರಥಮ ಬಾರಿಗೆ ವೈದ್ಯಕೀಯ ಸೇವೆಯ ಜೊತೆಗೆ ತುಳುನಾಡಿನ ಜಾನಪದ ಕ್ರೀಡೆ ಕಂಬಳದಲ್ಲಿ ಪಾಲ್ಗೊಳ್ಳಲಿದ್ದು, ಡಾಕ್ಟರ್ ಅವಿನ್ ಆಳ್ವರವರ ನೇತೃತ್ವದಲ್ಲಿ ವೈದ್ಯಕೀಯ ಸಂಘವು ಸ್ವತಃ ಕಂಬಳ ಕೋಣಗಳನ್ನು ಕಂಬಳಕ್ಕೆ ಇಳಿಸಲಿದೆ. ತುಳುನಾಡಿನ ಜಾನಪದ ಕ್ರೀಡಾ ಸಂಸ್ಕøತಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಎ.12ರಂದು ಸಂಜೆ 5ಗಂಟೆಗೆ ಆರಂಭಗೊಳ್ಳುವ ಕರಾವಳಿಯ ಜೋಡುಕರೆ ಕಂಬಳ ಟ್ರಸ್ಟ್ (ರಿ.)ಇದರ ಆಯೋಜನೆಯಲ್ಲಿ ಗುರುಪುರದಲ್ಲಿ ನಡೆಯುವ "ಮೂಳೂರು- ಅಡ್ಡೂರು" ಹೊನಲು...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಹಿಳೆಯರ ಸಬಲೀಕರಣ, ಸ್ವಾಲಂಬನೆಯ ಬದುಕು, ಸಮಾನ ಗೌರವ ಕಾಪಾಡಲು ಮೋದಿಯವರನ್ನು ಬೆಂಬಲಿಸಿ: ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ದೇಶದ ಮಹಿಳೆಯರ ಸಬಲೀಕರಣ, ಸ್ವಾಲಂಬನೆಯ ಬದುಕು, ಸಮಾನ ಗೌರವ ಹಾಗೂ ಮಹಿಳೆಯರಿಗೆ ನ್ಯಾಯವನ್ನು ಕೊಡುವ ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವನ್ನು ಸಾಕಾರ ಮಾಡಲು ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು. ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ನಡೆದ ನಾರಿಶಕ್ತಿ ಸಮಾವೇಶದಲ್ಲಿ ಮಾತನಾಡಿದ ಅವರು ಇಂದಿನ ವಿತ್ತ ಸಚಿವರು ಮಹಿಳೆ, ದೇಶದ ರಾಷ್ಟ್ರಪತಿ ಹುದ್ದೆ ಅಲಂಕರಿಸಿರುವುದು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಮಹಾನಗರ ಪಾಲಿಕೆಯ ಅಧಿಕಾರಿಗಳ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಆರೋಪಿಗಳು ಖುಲಾಸೆ –ಕಹಳೆ ನ್ಯೂಸ್

ಮಂಗಳೂರು : ಏಳು ವರ್ಷಗಳ ಹಿಂದೆ ಬಲ್ಮಟ ಸರ್ಕಲ್ ಬಳಿ ಅನಧಿಕೃತವಾಗಿ ಫ್ಲೇಕ್ಸ್ ಮತ್ತು ಬಂಟಿಂಗ್ ಅಳವಡಿಸಿದ್ದು ಅದನ್ನು ತೆರವುಗೊಳಿಸುವ ಕರ್ತವ್ಯಕ್ಕೆ ನೇಮಿಸಿದ್ದಾರೆ ಎನ್ನಲಾದ ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಮಂಗಳೂರಿನ ಕಾರ್ಪೊರೇಟರ್ ವಿಜಯ್ ಕುಮಾರ್ ಶೆಟ್ಟಿ, ಹಿಂದಿನ ಮಹಾಪೌರರಾಗಿದ್ದ ದಿವಾಕರ್ ಪಾಂಡೇಶ್ವರ, ನವೀನ್ ಚಂದ್ರ, ರಾಜೇಂದ್ರ,ಮೋನಪ್ಪ ಭಂಡಾರಿ ಮತ್ತು ರೂಪಾ.ಡಿ ಬಂಗೇರವರಗಳನ್ನು ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯವು ನಿರಪರಾಧಿಗಳೆಂದು ಬಿಡುಗಡೆಗೊಳಿಸಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸರಕಾರಿ ಕಚೇರಿಗಳಲ್ಲಿ ಪಕ್ಷಿಗಳಿಗಾಗಿ ಪಾತ್ರೆಗಳಲ್ಲಿ ನೀರು ಇಡಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ –ಕಹಳೆ ನ್ಯೂಸ್

ಮಂಗಳೂರು ಎಪ್ರಿಲ್ 09: ದಕ್ಷಿಣಕನ್ನಡದಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದ್ದು, ಪ್ರಾಣಿ ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಮಡಕೆ, ಪಾತ್ರೆ, ಅಥವಾ ಟಬ್‌ಗಳಲ್ಲಿ ಸಾಕಷ್ಟು ನೀರು ತುಂಬಿಸಿಡುವ ಮೂಲಕ ಹಕ್ಕಿಗಳಿಗೆ ನೀರುಣಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದಾರೆ. ಬೇಸಿಗೆಯಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಉಂಟಾಗಿದೆ. ಒಂದು ವಾರದಿಂದ ಈಚೆಗೆ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ತಾಯಂದಿರು ಕ್ರೂಡಿಕರಿಸಿ ನೀಡಿದ ದೇಣಿಗೆಯ ಠೇವಣಿ ಹಣ ನನಗೆ ಅಮೂಲ್ಯವಾದದ್ದು: ಕ್ಯಾಪ್ಟನ್ ಬ್ರಿಜೇಶ್ ಚೌಟ –ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಠೇವಣಿ ಹಣ ನೂರಾರು ಕೋಟಿ ರೂಗಳನ್ನು ಘೋಷಿಸಿದ ಅಭ್ಯರ್ಥಿಗಳಿಗೆ ಇದು ಕೇವಲ ಹಣವಷ್ಟೇ, ಆದರೆ ನನಗೆ ವಿವಿಧ ಸಮುದಾಯದ ತಾಯಂದಿರು ಕ್ರೂಡಿಕರಿಸಿ ನೀಡಿದ ದೇಣಿಗೆಯ ಠೇವಣಿ ಹಣ ನನಗೆ ಅಮೂಲ್ಯವಾದದ್ದು ಹಾಗೂ ತಾಯಂದಿರ ಬೆಂಬಲದ ಬಲದಿಂದ ನನಗೆ ಅತ್ಯಧಿಕ ಅಂತರದ ಗೆಲುವಾಗಲಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಅಭಿಮಾನದಿಂದ ಹೇಳಿದರು. ಕೊಲ್ಯದ ಕುಲಾಲ ಭವನದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೋಳ್ಯೂರುಪದವು ಕೊರಗ ತನಿಯ ದೈವ ಸಾನಿದ್ಯದಲ್ಲಿ ಏ.07ರಂದು ವರ್ಷಾವಧಿ ಕೋಲ – ಕಹಳೆ ನ್ಯೂಸ್

ಮಂಗಳೂರು : ಕೋಳ್ಯೂರುಪದವು ಕೊರಗ ತನಿಯ ದೈವ ಸಾನಿದ್ಯದಲ್ಲಿ ಏ.07ರಂದು ವರ್ಷಾವಧಿ ಕೋಲ ನಡೆಯಲಿದೆ. ಏ.08ರಂದು ಹರಕೆ ಕೋಲವು ನಡೆಯಲಿದ್ದು, ಭಕ್ತಾಧಿಗಳು ಬಂದು ಶ್ರೀ ದೈವದ ಕ್ರಪಾಕಟಾಕ್ಷಕ್ಕೆ ಪಾತ್ರರಾಗುವಂತೆ ದಿ| ಗಂಗಯ್ಯ ಮೇಸ್ರಿ ಮತ್ತು ದಿ|ಲಕ್ಮೀ ಇವರ ಮಕ್ಕಳು ಮತ್ತು ಕುಟುಂಬಸ್ಥರು ಮನವಿ ಮಾಡಿದ್ದಾರೆ....
ಉಡುಪಿಮಂಗಳೂರುಸುದ್ದಿ

ಸುರತ್ಕಲ್: ಶುಭಗಿರಿ ಬಳಿ ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆ ಮೃತ್ಯು –ಕಹಳೆ ನ್ಯೂಸ್

ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಭಗಿರಿ ಬಳಿ ಬುಧವಾರ ರಾತ್ರಿ ವರದಿಯಾಗಿದೆ. ಮೃತರನ್ನು ಹೊಸಬೆಟ್ಟು ನಿವಾಸಿ ಲಕ್ಷ್ಮೀ ( 69) ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಲಕ್ಷ್ಮೀ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಲಕ್ಷ್ಮೀ ಅವರು ಮಂಗಳೂರು ಕಡೆಯಿಂದ ಬಸ್ ನಲ್ಲಿ ಬಂದು ರಾಷ್ಟ್ರೀಯ ಹೆದ್ದಾರಿ...
1 99 100 101 102 103 108
Page 101 of 108