Saturday, March 7, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

100ಲಕ್ಷ ರೂ ಅನುದಾನದಲ್ಲಿ ಕಾವೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ತರಗತಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸಿದ ಶಾಸಕ ಡಾ| ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಪದವಿಪೂರ್ವ ಕಾಲೇಜು ಕಾವೂರು ಇಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಸಕ ಡಾ| ಭರತ್ ಶೆಟ್ಟಿ ವೈ ರವರ ಶಿಫಾರಸು ಮೇರೆಗೆ 2022-23ನೇ ಸಾಲಿನ ವಿವೇಕ ಯೋಜನೆಯಡಿಯಲ್ಲಿ 100ಲಕ್ಷ ರೂ ಅನುದಾನದಲ್ಲಿ ನಾಲ್ಕು ತರಗತಿ ಕೊಠಡಿಗಳು ಮಂಜೂರಾಗಿದ್ದು, ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕರಾದ ಡಾ| ಭರತ್ ಶೆಟ್ಟಿ ವೈ ಇವರು ನೆರವೇರಿಸಿದರು. ಸ್ಥಳೀಯ ಕಾರ್ಪೋರೇಟರ್‌ ಸುಮಂಗಳ ರಾವ್, ಕಾಲೇಜಿನ ಪ್ರಾಂಶುಪಾಲರಾದ ಮಮತ ಎ, ಉಪನ್ಯಾಸಕ...
ದಕ್ಷಿಣ ಕನ್ನಡಮಂಗಳೂರುಸುದ್ದಿ

70ಲಕ್ಷ ವೆಚ್ಚದಲ್ಲಿ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿ ನಿರ್ಮಾಣಗೊಳ್ಳಲಿರುವ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿ 70ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂಲಭೂತ ಸೌಕರ್ಯಗಳಾದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ಅವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಶ್ರೀ ಕ್ಷೇತ್ರವು ಜಿಲ್ಲೆ ಮಾತ್ರವಲ್ಲದೇ ನಾಡಿನ ಪ್ರಮುಖ ದೇವಸ್ಥಾನಗಳಲ್ಲೊಂದಾಗಿದೆ. ಪ್ರತಿನಿತ್ಯ ಇಲ್ಲಿಗೆ ನೂರಾರು ಭಕ್ತರು ಭೇಟಿ ನೀಡುತ್ತಲಿದ್ದು ದಸರಾ ಸಂದರ್ಭದಲ್ಲಂತೂ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಇಂತಹ ಕ್ಷೇತ್ರಕ್ಕೆ ಉತ್ತಮ ಮೂಲಭೂತ ಸೌಕರ್ಯಗಳು...
ಮಂಗಳೂರುಸುದ್ದಿ

ಮಂಗಳೂರು : ಮಳೆನೀರು ಚರಂಡಿ ಹಾಗೂ ಫುಟ್ ಪಾತ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್. ಐ. ಆರ್. ನಿಧಿಯಿಂದ 2 ಕೋಟಿ ವೆಚ್ಚದ ಕದ್ರಿ ಗ್ರೌಂಡಿನಿo ದ ಕದ್ರಿ ಕಂಬಳ ರಸ್ತೆವರೆಗೆ ಮಳೆನೀರು ಚರಂಡಿ ಹಾಗೂ ಫುಟ್ ಪಾತ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಮಳೆಗಾಲದಲ್ಲಿ ಇಲ್ಲಿನ ಸ್ಥಳೀಯರಿಗೆ ಅತೀವ ತೊಂದರೆಯಾಗುತ್ತಿದ್ದ ಬಗ್ಗೆ ಮ.ನ.ಪಾ ಸದಸ್ಯರಾದ ಮನೋಹರ್ ಕದ್ರಿಯವರು ಗಮನಕ್ಕೆ ತಂದಿದ್ದು ಈ ಸಮಸ್ಯೆಗೆ ಶಾಶ್ವತ ಪರಿಹಾರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಬೋಧಕರ ಪುನಶ್ಚೇತನಾ ಕಾರ್ಯಾಗಾರ ಮುಕ್ತಾಯ – ಕಹಳೆ ನ್ಯೂಸ್

ಮಂಗಳೂರು : ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ,ಎ.ಐ.ಸಿ.ಟಿ.ಇ. - ಎ.ಟಿ.ಎ.ಎಲ್ ಸಹಯೋಗದೊಂದಿಗೆ ಆಯೋಜಿಸಲಾದ, ಒಂದು ವಾರದ "ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ ಲರ್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್" ಎಂಬ ಬೋಧಕರ ಪುನಶ್ಚಾತನ ಕಾರ್ಯಾಗಾರದ ಸಮಾರೋಪ ಸಮಾರಂಭಐ.ಬಿ.ಎA. ಸೆಂಟರ್ ಆಫ್ ಎಕ್ಸಲೆನ್ಸ್ ಹಾಲ್ ನಲ್ಲಿ ಇತ್ತೀಚೆಗೆನಡೆಯಿತು. ಮುಖ್ಯ ಅತಿಥಿ, ಸಂಪನ್ಮೂಲ ವ್ಯಕ್ತಿ ಡಾ. ದಿನೇಶ್ ಆರ್(ಸ್ಯಾಮ್ ಸಂಗ್, ಬೆಂಗಳೂರು) ಮಾತನಾಡಿ, ಕೃತಕ ಬುದ್ದಿಮತ್ತೆ ಹಾಗೂ ಯಂತ್ರಕಲಿಕೆ...
ಕಡಬಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಡಬ ಆ್ಯಸಿಡ್ ದಾಳಿ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ – ಕಹಳೆ ನ್ಯೂಸ್

ಮಂಗಳೂರು: ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಆ್ಯಸಿಡ್ ದಾಳಿಯಲ್ಲಿ ಗಾಯಗೊಂಡ ಮೂವರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರು ದಾಖಲಾಗಿರುವ ಖಾಸಗಿ ಆಸ್ಪತ್ರೆಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ ನೀಡಿದ್ದಾರೆ. ಭೇಟಿ ಬಳಿಕ ಮಾತನಾಡಿದ ನಂದನ್ ಮಲ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಕಡಬ ಘಟನೆ ಉದಾಹರಣೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದ್ದು, ಆರೋಪಿಯ ಹಿನ್ನೆಲೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರು : ವಿಶ್ವವಿದ್ಯಾನಿಲಯದ ಆರ್ಥಿಕ ಶ್ವೇತಪತ್ರ ಬಿಡುಗಡೆಗೆ ಹರೀಶ್ ಆಚಾರ್ಯ ಆಗ್ರಹ-ಕಹಳೆ ನ್ಯೂಸ್

ಮಂಗಳೂರು ವಿಶ್ವವಿದ್ಯಾನಿಲಯವು ಹಲವಾರು ತಿಂಗಳುಗಳಿಂದ ತೀವ್ರ ಆರ್ಥಿಕ ಅಡಚಣೆಯಿಂದ ಸುದ್ದಿಯಲ್ಲಿದೆ. ಕಳೆದ ಕೆಲವು ತಿಂಗಳುಗಳಿಂದ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ವೇತನವಿಲ್ಲದೆ ಪರದಾಡುತಿದ್ದಾರೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಭವಿಷ್ಯನಿಧಿ ಖಾತೆಗಳಿಗೆ ಬಾಕಿಯಿರುವ ಮೊಬಲಗನ್ನೂ ಹೊಂದಿಸಿಕೊಳ್ಳಲಾಗದ ಇಕ್ಕಟ್ಟಿನಲ್ಲಿ ವಿಶ್ವವಿದ್ಯಾನಿಲಯ ಇದೆ. ಸಾರ್ವಜನಿಕ ವಲಯದಲ್ಲಿ ವಿಶ್ವವಿದ್ಯಾನಿಲಯದ ಹಣಕಾಸು ನಿರ್ವಹಣೆ ಹಾಗೂ ಆರ್ಥಿಕ ಶಿಥಿಲತೆಯ ಬಗ್ಗೆ ಗಂಭೀರವಾದ ಪ್ರಶ್ನೆಗಳು ಮೂಡಿದೆ. ಈ ಸಂದೇಹಗಳು ನಿವಾರಣೆಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯವು ತನ್ನ ಆರ್ಥಿಕ...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಮಾ.1ರ ಶುಕ್ರವಾರ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾ| ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು...
ಮಂಗಳೂರುಸುದ್ದಿ

ಮಾ.3 ರಂದು ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ-ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಾದ್ಯಂತ ಮಾ.3 ರಂದು ಎಲ್ಲ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ- 5 ವರ್ಷದೊಳಗಿನ ಮಕ್ಕಳು ಲಸಿಕೆ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಕ್ಫ್ ಸಂಸ್ಥೆಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಂತರ ಕರೆ ನೀಡಿ ಪ್ರೇರೇಪಿಸಬೇಕು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
1 101 102 103 104 105
Page 103 of 105