Wednesday, June 10, 2026

ಮಂಗಳೂರು

ಜಿಲ್ಲೆಮಂಗಳೂರುಸುದ್ದಿ

ಮಂಗಳೂರು ನಗರದ ಕದ್ರಿ ಲೋಬೊ ಲೇನ್‌ನಲ್ಲಿ ನಕಲಿ ಮದ್ಯ ತಯಾರಿಕಾ ಅಡ್ಡೆಗೆ ಅಬಕಾರಿ ಅಧಿಕಾರಿಗಳು ದಾಳಿ – ಕಹಳೆ ನ್ಯೂಸ್

ಮಂಗಳೂರು : ನಗರದ ಕದ್ರಿ ಲೋಬೊ ಲೇನ್‌ನಲ್ಲಿ ನಕಲಿ ಮದ್ಯ ತಯಾರಿಕಾ ಅಡ್ಡೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 5,57,690 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಕಲ್ ಬೈಸ್ ಮಿನೇಜಸ್ ಎಂಬಾತನ ಮನೆಯಲ್ಲಿ ನಕಲಿ ಮದ್ಯ ತಯಾರಿಸಲಾಗುತ್ತದೆ ಎಂಬ ಖಚಿತ ವರ್ತಮಾನ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದರು. ಮೈಕಲ್ ಬೈಸ್ ಮಿನೇಜಸ್‌ನ ಮನೆಯಲ್ಲಿ ತಯಾರಿಸಿಟ್ಟಿದ್ದ ನಕಲಿ ವೈನ್ - 238.500 ಲೀಟರ್, ವೈನ್ ತಯಾರಿಸುವ ಕೊಳೆ -1,500...
ಅಂಕಣಕ್ರೈಮ್ಮಂಗಳೂರುಸುದ್ದಿ

ಬಂಗ್ಲೆಗುಡ್ಡ ರಹಸ್ಯ ; 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳದ  ಬಂಗ್ಲೆಗುಡ್ಡದ ರಹಸ್ಯ ಬೇಧಿಸಲು ಹೊರಟ ವಿಶೇಷ ತನಿಖಾ ತಂಡ ಇಂದು 2ನೇ ದಿನದ ಶೋಧ ಕಾರ್ಯ ನಡೆಸಿದೆ. ನಿನ್ನೆಯ ಶೋಧ ವೇಳೆ 5 ತಲೆ ಬುರುಡೆ ಸೇರಿ ನೂರಾರು ಮೂಳೆಗಳು ಸಿಕ್ಕಿದ್ದು ಅದೆಲ್ಲವೂ ಪುರುಷರದ್ದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಇಂದು ಕೂಡ ಬುರುಡೆ ಮತ್ತು ಅಸ್ಥಿಪಂಜರ  ಸಿಕ್ಕಿದ್ದು, ಇದರ ಜೊತೆಗೆ ಕೊಡಗು ಮೂಲದ ಯು.ಬಿ ಅಯ್ಯಪ್ಪ ಎಂಬುವವರಿಗೆ ಸೇರಿದ ಮಹತ್ವದ ದಾಖಲೆಗಳು ಪತ್ತೆಯಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಯೆಯ್ಯಾಡಿ ಜಂಕ್ಷನ್ ನಲ್ಲಿ ಭೀಕರ ರಸ್ತೆ ಅಪಘಾತ ; ಯುವ ಇಂಜಿನಿಯರ್ ಕೌಶಿಕ್ ಸಾವು -ಕಹಳೆ ನ್ಯೂಸ್

ಮಂಗಳೂರು : ನಗರದ ಯೆಯ್ಯಾಡಿ ಜಂಕ್ಷನ್‌ನಲ್ಲಿ ಬುಧವಾರ ನಡೆದ ಅಪಘಾತದಲ್ಲಿ ಯುವ ಎಂಜಿನಿಯರ್ ಸಾವಿಗೀಡಾಗಿದ್ದಾರೆ. ಸ್ಥಳೀಯ ನಿವಾಸಿ ಕೌಶಿಕ್ (27) ಮೃತಪಟ್ಟವರು. ನಿತ್ಯವೂ ಬೆಳಗ್ಗೆ ಮನೆಗಳಿಗೆ ಪೇಪ‌ರ್ ಹಾಕುತ್ತಿದ್ದರು. ತಂದೆಯ ಜೊತೆಗೆ ಬೆಳಗ್ಗೆ ಪೇಪರ್ ಹಾಕಿ ಬರುತ್ತಿರಬೇಕಾದರೆ ಕೌಶಿಕ್ ಸವಾರಿ ನಡೆಸುತ್ತಿದ್ದ ಬೈಕ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡ ಕೌಶಿಕ್ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸಂಚಾರಿ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....
ಅಂಕಣಕ್ರೈಮ್ಮಂಗಳೂರುಸುದ್ದಿ

ಧರ್ಮಸ್ಥಳ ಕೇಸ್ ; ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ  ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ  ಪೊಲೀಸರು ಹಾಜರುಪಡಿಸಲಿದ್ದಾರೆ. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಸೆ.6ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಎಸ್‍ಐಟಿ ಅಧಿಕಾರಿಗಳು ಬೆಳಗ್ಗೆ 11:30ಕ್ಕೆ ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಎಸ್‌ಐಟಿ ತನಿಖೆಗೆ ಟ್ವಿಸ್ಟ್‌...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಭಾರತೀಯ ಜನತಾ ಪಾರ್ಟಿ, ಮಂಗಳೂರು ಉತ್ತರಮಂಡಲ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಕಾವೂರು : ಭಾರತೀಯ ಜನತಾ ಪಾರ್ಟಿ, ಮಂಗಳೂರು ಉತ್ತರಮಂಡಲ ಯುವ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಕಾವೂರಿನ ಸೊಸೈಟಿ ಸಭಾಂಗಣದಲ್ಲಿ ಬುಧವಾರ ಜರಗಿತು. ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿ, ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆ. 17 ಅ. 2ನೇ ತಾರೀಖಿನವರೆಗೆ ಜಿಲ್ಲೆ, ರಾಜ್ಯ, ದೇಶದಾದ್ಯಂತ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಥಮ ಬಾರಿಗೆ ಮಂಗಳೂರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆಂಪು ಕಲ್ಲು, ಮರಳು ಒದಗಿಸಲು ಒತ್ತಾಯಿಸಿ ಬಿಜೆಪಿ ಧರಣಿ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ತೀವ್ರ ಕೊರತೆ ಉಂಟಾಗಿದ್ದು, ಈ ಗಂಭೀರ ಸಮಸ್ಯೆಯನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಇನ್ನೂ ಬಗೆಹರಿಸದಿರುವುದನ್ನು ಖಂಡಿಸಿ ಮಂಗಳವಾರ (ಸೆ.16) ಮಿನಿವಿಧಾನಸೌಧದ ಎದುರು ಬಿಜೆಪಿ ಬೃಹತ್ ಪ್ರತಿಭಟನಾ ಧರಣಿ ಆರಂಭಿಸಿದೆ. ಬೃಹತ್ ಪ್ರತಿಭಟನಾ ಧರಣಿ ಗೆ ಚಾಲನೆ ನೀಡಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಸಮಸ್ಯೆಗೆ ಉತ್ತರ ಹುಡುಕುವ ಪ್ರಯತ್ನವನ್ನು ಸರಕಾರ ಮಾಡುತ್ತಿಲ್ಲ. ದಿನೇಶ್ ಗುಂಡೂರಾವ್ ಹೆಸರಿಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಸಿಗದ ವೇಗ: ಡಾ. ಭರತ್ ಶೆಟ್ಟಿ ವೈ ಅಧಿಕಾರಿಗಳ ವಿರುದ್ದ ಅಸಮಾಧಾನ -ಕಹಳೆ ನ್ಯೂಸ್

ಸುರತ್ಕಲ್ : ಮಂಗಳೂರು ಉತ್ತರ ವಿಧಾನ ಸಭಾ ವ್ಯಾಪ್ತಿಯ ಮಂಗಳೂರು ಮಹಾ ನಗರ ಪಾಲಿಕೆಯ ವಾರ್ಡ್ ಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸ ಕಾರ್ಯಗಳು ವಿವಿಧ ಕಾರ್ಯಗಳಿಗಾಗಿ ಕುಂಟುತ್ತಾ ಸಾಗಿದ್ದು,ಶಾಸಕ ಡಾ. ಭರತ್ ಶೆಟ್ಟಿ ವೈ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದರು. ಸುರತ್ಕಲ್ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಸ್ಪಷ್ಟ ಉತ್ತರ ನೀಡದೆ ಸಮಸ್ಯೆಯಿಂದ ಕಾಮಗಾರಗಳ ವೇಗಕ್ಕೆ ತಡೆಯಾಗಿದೆ ಎಂದರು.ಆಗ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸದೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿಯಲ್ಲಿ 43ನೇ ರಾಷ್ಟ್ರೀಯ ಮಕ್ಕಳ ಉತ್ಸವ ; ಮುದ್ದು ಕೃಷ್ಣ ಸ್ಪರ್ಧೆ ಯಲ್ಲಿ ರಿತನ್ಯಾ ಕೊಟ್ಟಾರಿಗೆ ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಮಂಗಳೂರು: ಕದ್ರಿ ಮಂಜುನಾಥ ಕ್ಷೇತ್ರದ ಅವರಣದಲ್ಲಿ ಕಲ್ಕೂರ ಪ್ರತಿಷ್ಠಾನದಿಂದ ಅಯೋಜಿಸಿದ 43ನೇ ‌ ರಾಷ್ಟ್ರೀಯ ಮಕ್ಕಳ ಉತ್ಸವ (ಶ್ರೀ ಕೃಷ್ಣ ವೇಷ ಸ್ಪರ್ಧೆ) ಎರಡು ವರ್ಷದೊಳಗಿನ ಮುದ್ದು ಕೃಷ್ಣ ವಿಭಾಗದಲ್ಲಿ ಸ್ಪರ್ಧಿಸಿದ ಅನುಶ್ ನಯನ ಕೊಟ್ಟಾರಿ ಅವರ ಪುತ್ರಿ ರಿತನ್ಯ ಕೊಟ್ಟಾರಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ಪ್ರಥಮ ಸ್ಥಾನವನ್ನು ಶಾಹಿಸ್ ಎಸ್ ಶೆಟ್ಟಿ ಪಡೆದ್ರು.ಒಟ್ಟು 12 ವೇದಿಕೆಗಳಲ್ಲಿ ಏಕಕಾಲದಲ್ಲಿ ನಾನಾ ವಿಭಾಗಗಳಲ್ಲಿ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಿತು.....
1 20 21 22 23 24 111
Page 22 of 111