Friday, March 13, 2026

ಮಂಗಳೂರು

ಉಡುಪಿದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುಸುದ್ದಿ

ಮಂಗಳೂರಿನ ಪೊಲೀಸ್ ಕಮಿಷನ‌ರ್ ಹಾಗು ಎಸ್ಪಿ ವರ್ಗಾವಣೆ… ನೂತನ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗು ಎಸ್ಪಿ ಯಾಗಿ ಅರುಣ್ ಕುಮಾ‌ರ್ ನೇಮಕ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ  ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಜಾತಿಯಿಂದಲೇ ದೇಶದ ಅಭಿವೃದ್ಧಿಗೆ ತಡೆಗೋಡೆ: ದ್ವಾರಕಾನಾಥ್ -ಕಹಳೆ ನ್ಯೂಸ್

ಮಂಗಳೂರು : ಭಾರತ ಜಾತಿಗಳ ದೇಶ. ಜಾತಿಯೇ ಯಾವುದೇ ಅಭಿವೃದ್ಧಿಗೆ ತಡೆಗೋಡೆಯಾಗಿದೆ. ಜಾತಿಯನ್ನೇ ಮೇಲ್ವರ್ಗದವರು ಸಾಮಾಜಿಕ ಬಂಡವಾಳವನ್ನಾಗಿಸಿಕೊಂಡು ಮೇಲ್ಮಟ್ಟಕ್ಕೆ ಹೋಗಲು ಸಾಧ್ಯ. ಆದರೆ ಕೆಳ ಜಾತಿಯವರು ಕೆಳಮಟ್ಟದಲ್ಲೇ ಇಂದಿಗೂ ಇರುವುದು ವಿಷಾದನೀಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ. ಎಸ್. ದ್ವಾರಕಾನಾಥ್ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಪೀಠ, ಡಾ. ಬಿ. ಆರ್. ಅಂಬೇಡ್ಕರ್...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮಂಗಳೂರುಸುದ್ದಿ

ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ 3  ದಿನ ನಿಷೇಧಾಜ್ಞೆ ಜಾರಿ !- ಕಹಳೆನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27 ಸಂಜೆ 6 ರಿಂದ 30 ಸಂಜೆ 6 ರವರೆಗೆ ನಿಷೇಧಾಜ್ಞೆ ಜಾರಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕನಸು ನನಸಾಗಲು ಶ್ರಮ ಪಡಬೇಕು: ಡಾ. ಗಣೇಶ್ ಮೊಗವೀರ-ಕಹಳೆ ನ್ಯೂಸ್

ಮಂಗಳೂರು : ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಪದವಿ ಹಂತದ ವ್ಯಾಸಂಗ ಒಳ್ಳೆಯ ಸಮಯ. ಸೂಕ್ತ ಫಲ ಸಿಗಬೇಕಾದರೆ ಬದುಕಿನಲ್ಲಿ ಕಷ್ಟ ಪಡಬೇಕು. ಕನಸು ಕಾಣುವುದು ಮಾತ್ರವಲ್ಲ, ಆ ಕನಸು ನನಸಾಗಲು ಶ್ರಮ ಪಡಬೇಕು ಎಂದು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಇಂಜಿನಿಯರಿಂಗ್  ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥ ಡಾ. ಗಣೇಶ್ ಮೊಗವೀರ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ವೃತ್ತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಧಾರಾಕಾರ ಮಳೆಯ ನಡುವೆಯೇ ನಡುರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು -ಕಹಳೆ ನ್ಯೂಸ್

ಮಂಗಳೂರು ನಗರದ ಕುಲಶೇಖರ ಕಲ್ಪನೆ ಬಳಿ‌ ನಡುರಸ್ತೆಯಲ್ಲಿಯೇ ಕಾರೊಂದು ಧಗಧಗನೇ ಹೊತ್ತಿ ಉರಿದ ಘಟನೆ ನಡೆದಿದೆ. ರವಿವಾರ ಮಧ್ಯಾಹ್ನ 12ಗಂಟೆಗೆ ಈ ಘಟನೆ ನಡೆದಿದೆ. ಸ್ವಿಫ್ಟ್ ಡಿಸಾಯರ್ ಟ್ಯಾಕ್ಸಿಯಲ್ಲಿ ಮೊದಲಿಗೆ ಹೊಗೆ ಕಾಣಿಸಿಕೊಂಡಿದೆ. ಬಳಿಕ ಕಾರು ಸಂಪೂರ್ಣ ಧಗಧಗನೇ ಹೊತ್ತಿ ಉರಿದಿದೆ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ ಕಾರಿನಲ್ಲಿ ಬೆಂಕಿಯ ಜ್ವಾಲೆ ಏಳುತ್ತಿರುವ ದೃಶ್ಯ ವೀಡಿಯೋದಲ್ಲಿ ದಾಖಲಾಗಿದೆ.‌ ಸದ್ಯ ಸ್ಥಳದಲ್ಲಿದ್ದವರೇ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಕಾರು ಯಾರಿಗೆ ಸೇರಿದ್ದು,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಹುಕ್ಕಾ ಬಾರ್‌ ಮೇಲೆ ಸಿಸಿಬಿ ದಾಳಿ: ಮೂವರ ಬಂಧನ -ಕಹಳೆ ನ್ಯೂಸ್

ಮಂಗಳೂರು: ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡನಾಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಹುಕ್ಕಾ ಬಾರ್‌ ಮೇಲೆ ಸಿಸಿಬಿ ಪೊಲೀಸರು ಭಾನುವಾರ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಕಂಕನಾಡಿಯ ಮ್ಯಾಕ್ ಮಾಲ್‌ನ ಪಾರ್ಕಿಂಗ್‌ನಲ್ಲಿ ಬ್ಲ್ಯಾಕ್ ಮೂನ್ ರೆಸ್ಟೊ ಕಫೆ ಎಂಬ ಹೆಸರಿನಲ್ಲಿ ಕೊಠಡಿಯೊಂದರಲ್ಲಿ ಬಾರ್ ನಡೆಸುತ್ತಿದ್ದ ಸಿದ್ದಿಕ್, ಅಬ್ದುಲ್ ನಾಸಿರ್ ಮತ್ತು ಸಫ್ವಾನ್ ಎಂಬವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. 2024ರಲ್ಲಿ ಕೆಫೆಟೇರಿಯಾ ನಡೆಸಲು ಮಂಗಳೂರು ಮಹಾನಗರಪಾಲಿಕೆಯಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ -ಕಹಳೆ ನ್ಯೂಸ್

ಮಂಗಳೂರು: ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾಡು,ಹೊರನಾಡು ಮತ್ತು ವಿದೇಶಗಳಲ್ಲಿರುವ ವಿವಿಧ ಕ್ಷೇತ್ರಗಳ 74 ಮಂದಿ ಸಾಧಕರನ್ನು ಗುರುತಿಸಿ ಈ ಬಾರಿಯ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನೀಡಿದೆ. ಮೇ 22ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಖ್ಯಾತ ಉದ್ಯಮಿ, ಸಾಮಾಜಿಕ ಮತ್ತು ಶಿಕ್ಷಣ ಕ್ಷೇತ್ರದ ಸಾಧಕ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು 2025 ಸಾಲಿನ ಆರ್ಯಭಟ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ: ಸಂಸದ ಕ್ಯಾ. ಚೌಟ ಆಕ್ರೋಶ -ಕಹಳೆ ನ್ಯೂಸ್

ಮಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಆದೇಶದ ಮೂಲಕ ಸಿಎಂ ಸಿದ್ದರಾಮಯ್ಯ ಸರ್ಕಾರ ಬಡಜನರ ಆರೋಗ್ಯಕ್ಕೆ ಮರಣಶಾಸನ ಬರೆದು ಅವರ ಬದುಕನ್ನು ಮತ್ತಷ್ಟು ದುಸ್ತರಗೊಳಿಸಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಕ್ಯಾ....
1 26 27 28 29 30 105
Page 28 of 105