ಉಪ್ಪಿನಂಗಡಿ ಉದನೆ ಸಮೀಪ ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್: ಚಾಲಕ ಮೃತ್ಯು – ಕಹಳೆ ನ್ಯೂಸ್
ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಬಸ್ ಚಾಲಕರನ್ನು ಭರತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ....







