ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಆರೋಪದಡಿ ಶಾಸಕ ಡಾ.ಭರತ್ ಶೆಟ್ಟಿಯವರ ಮೇಲೆ ಪ್ರಕರಣ ದಾಖಲು : ಕಾಂಗ್ರೆಸ್ ನಾಯಕರ ನಡೆ ಖಂಡಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್
ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಆರೋಪದಡಿ ಶಾಸಕ ಡಾ.ಭರತ್ ಶೆಟ್ಟಿಯವರ ಮೇಲೆ ಕಾಂಗ್ರೆಸ್ ನಾಯಕರ ಆಣತಿಯಂತೆ ರಾಜಕೀಯ ಪ್ರೇರಿತ ಪ್ರಕರಣ ದಾಖಲಾಗಿದ್ದನ್ನು ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರವಾಗಿ ಖಂಡಿಸಿದರು. ವಿದೇಶದಲ್ಲಿದ್ದಾಗ ಭಾರತದ ವಿರುದ್ದ, ಸ್ವದೇಶದಲ್ಲಿದ್ದಾಗ ಹಿಂದೂಗಳ ವಿರುದ್ಧ ಹೇಳಿಕೆ ನೀಡುವ ರಾಹುಲ್ ಗಾಂಧಿಗೆ ಪ್ರತಿಭಟನೆ ಮೂಲಕ ಬಿಸಿ ಮುಟ್ಟಿಸದೇ ಹಾರ ಹಾಕಿ ಗೌರವಿಸಬೇಕಿತ್ತಾ? ಅಥವಾ ಬಹುಮಾನ ಘೋಷಿಸಬೇಕಿತ್ತಾ? ಕಾಂಗ್ರೆಸ್ಸಿಗರಿಗೆ ಅಂತಹ ದುರ್ಗತಿ ಬಂದಿರಬಹುದು. ನಮ್ಮದು ಎಂದಿಗೂ ರಾಷ್ಟ್ರ...







