ಮರಗೋಡು ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಮತ್ತು ನಾವಿಕ ಸಂಸ್ಥೆಗಳ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ವಿತರಣೆ-ಕಹಳೆ ನ್ಯೂಸ್
ಮಡಿಕೇರಿ : ಸಮಾಜದಲ್ಲಿ ಸಹಾಯದ ನಿರೀಕ್ಷೆಯಲ್ಲಿರುವ ವರ್ಗವಿರುವಂತೆ ಸಹಾಯದ ಹಸ್ತ ಚಾಚಲು ಸಿದ್ಧವಾಗಿರುವ ವರ್ಗವೂ ಇರುತ್ತದೆ. ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯದಲ್ಲಿ ನಿರಂತರವಾಗಿ ತೊಡಗುತ್ತಿದ್ದು ವಿದ್ಯಾರ್ಥಿಗಳು ಇದರ ಸಹಾಯವನ್ನು ಪಡೆದುಕೊಂಡು ಪ್ರಗತಿ ಸಾಧಿಸಬೇಕೆಂದು ರೋಟರಿ ಸಂಸ್ಥೆಯ ಅಧ್ಯಕ್ಷ ಪಿ.ಟಿ.ಗಣಪತಿ ಕರೆ ನೀಡಿದರು. ಮರಗೋಡು ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಮತ್ತು ನಾವಿಕ ಸಂಸ್ಥೆಗಳ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು. ನಾವಿಕ...



