ಸೋಮವಾರಪೇಟೆ | ಭಾರಿ ಗಾಳಿ ಮಳೆ: ಹಾನಿ –ಕಹಳೆ ನ್ಯೂಸ್
ಸೋಮವಾರಪೇಟೆ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿದಿದ್ದು, ಅಲ್ಲಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ದೊಡ್ಡತೋಳೂರು ಗ್ರಾಮದ ದಿನೇಶ್ ಎಂಬುವವರ ಹಸು ಶೀತದಿಂದ ಕೊಟ್ಟಿಗೆಯಲ್ಲಿ ಮೃತಪಟ್ಟಿದೆ. ಸ್ಥಳಕ್ಕೆ ಪಶು ವೈದ್ಯರು ತೆರಳಿ ಪರಿಶೀಲಿಸಿದರು. ಕುಸೂಬೂರು ದೇವಾಲಯದ ಮುಂಭಾಗ ರಾಜ್ಯ ಹೆದ್ದಾರಿಯ ಬದಿಯಲ್ಲಿದ್ದ ವಿದ್ಯುತ್ ಕಂಬದ ಮೇಲೆ ಮರಬಿದ್ದು, ಹೆದ್ದಾರಿಗೆ ವಿದ್ಯುತ್ ಕಂಬ ಮತ್ತು ಲೈನ್ ವಾಲಿದೆ. ಖಾಸಗಿ ಬಸ್ ಮೇಲೆ ನಿಂತು ಸೆಸ್ಕ್ ಸಿಬ್ಬಂದಿಗಳು ವಿದ್ಯುತ್ ಕಂಬ...







