ಹಿಜಾಬ್-ಕೇಸರಿ ಸಂಘರ್ಷ ; ಕೇಸರಿ ಶಾಲು ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ, ವಿದ್ಯಾರ್ಥಿಯಿಂದ ಮನನೊಂದ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್
ಕೊಡಗು: ರಾಜ್ಯದಲ್ಲಿ ವಿಕೋಪಕ್ಕೆ ತೆರಳಿರುವ ಹಿಜಾಬ್-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ ಪ್ರಜ್ವಲ್ (18) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ. ಕೇಸರಿ ಶಾಲು ಧರಿಸಿದ್ದಕ್ಕೆ ಈತನ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ ಹೊರಿಸಿದ್ದಷ್ಟೇ ಅಲ್ಲದೆ ಹಲ್ಲೆಯನ್ನೂ ಮಾಡಿತ್ತು. ಇದರಿಂದ ನೊಂದು ಈತ...







