ಕಡಬ | ಶಿಕ್ಷಕರ ಕೊರತೆ, ಶೂನ್ಯ ದಾಖಲಾತಿಯಿಂದ ಮುಚ್ಚುವಂತಾದ ಶಾಲೆ ಬಾಗಿಲು-ಕಹಳೆ ನ್ಯೂಸ್
ಕಡಬ (ಉಪ್ಪಿನಂಗಡಿ): ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ, ಅವರ ಬಾಳು ಬೆಳಗಿಸಿದ ಕಡಬ ತಾಲ್ಲೂಕಿನ 2 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಈ ವರ್ಷದ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಶೂನ್ಯ ದಾಖಲಾತಿಯಿಂದ ಬಾಗಿಲು ಮುಚ್ಚಿದೆ. ಶಿಕ್ಷಕರ ಕೊರತೆಯಿಂದಾಗಿ ಶಾಲೆಗೆ ಈ ಸ್ಥಿತಿ ಬಂದಿರುವ ಬಗ್ಗೆ ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಕಡಬ ತಾಲ್ಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಬಿಳಿನೆಲೆ ಗ್ರಾಮದ ಚೇರು...







