ಒಂದೇ ದಿನದಲ್ಲಿ ಕುಮಾರ ಪರ್ವತಾರೋಹಣ ಮಾಡಿದ 1,000ಕ್ಕೂ ಹೆಚ್ಚು ಟ್ರೆಕ್ಕಿಂಗ್ ಉತ್ಸಾಹಿಗಳು : ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಟ್ರೆಕ್ಕಿಂಗ್ ನಿಷೇಧ – ಕಹಳೆ ನ್ಯೂಸ್
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆಬ್ರವರಿ 1ರಿಂದ ನಿಷೇಧಿಸಲಾಗಿದೆ. ಚಾರಣಿಗರ ದಂಡು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ಋತುವಿನಿಂದ ಆನ್ ಲೈನ್ ಬುಕ್ಕಿಂಗ್ ಗೆ ಮಾತ್ರ ಅವಕಾಶ ನೀಡುವ ಸಾಧ್ಯತೆ ಇದೆ. ಸದ್ಯ ಜಿಲ್ಲಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ...






