Tuesday, May 21, 2024

ಕಡಬ

ಕಡಬದಕ್ಷಿಣ ಕನ್ನಡರಾಜ್ಯಸುದ್ದಿ

ಚಾಕೊಲೇಟ್ ಎಂದು ಭಾವಿಸಿ ಮಾತ್ರೆ ಸೇವಿಸಿ ಮೃತಪಟ್ಟ ಮಗು-ಕಹಳೆ ನ್ಯೂಸ್

ಚಾಕೋಲೆಟ್ ಎಂದು ಭಾವಿಸಿ ಮಗುವೊಂದು ಮಾತ್ರೆ ಸೇವಿಸಿ ಮೃತಪಟ್ಟಿರುವ ಘಟನೆ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಋತ್ವಿಕ್ (5) ಎಂದು ಗುರುತಿಸಲಾಗಿದೆ. ತಂದೆ ತಿಪ್ಪೇಸ್ವಾಮಿಗೆ ಅನಾರೋಗ್ಯದ ನಿಮಿತ್ತ ವೈದ್ಯರ ಸಲಹೆಯಂತೆ ಮಾತ್ರೆಗಳನ್ನು ತಂದು ಮನೆಯಲ್ಲಿಟ್ಟಿದ್ದು, ಅದನ್ನು ಮಗು ಚಾಕೋಲೆಟ್ ಎಂದು ಭಾವಿಸಿ ಸೇವಿಸಿದ್ದಾನೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಕೂಡಲೇ ಮಗುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತುರುವನೂರು ಠಾಣೆಯಲ್ಲಿ ಪ್ರಕರಣ...
ಕಡಬದಕ್ಷಿಣ ಕನ್ನಡರಾಜಕೀಯಸುದ್ದಿಸುಳ್ಯ

ಬಿಜೆಪಿ ಯುವಮೊರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿ ಶ್ರೀಕೃಷ್ಣ ಎಂ.ಆರ್ ನೇಮಕ – ಕಹಳೆ ನ್ಯೂಸ್

ಸುಳ್ಯ: ಬಿಜೆಪಿ ಯುವಮೋರ್ಚಾ ದ.ಕ.ಜಿಲ್ಲಾ ಕಾರ್ಯದರ್ಶಿಯಾಗಿಶ್ರೀಕೃಷ್ಣ ಎಂ ಆರ್ ನೇಮಕಗೊಂಡಿದ್ದಾರೆ. ಯುವಮೋರ್ಚಾ ಸುಳ್ಯ ಮಂಡಲ ಸಮಿತಿ ಮಾಜಿ ಅಧ್ಯಕ್ಷರಾದ ಶ್ರಿಕೃಷ್ಣ ಅವರನ್ನು ಜಿಲ್ಲಾ ಕಾರ್ಯದರ್ಶಿಯಾಗಿ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ನೇಮಕ ಮಾಡಿದ್ದಾರೆ....
ಕಡಬಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಡಬ ಆ್ಯಸಿಡ್ ದಾಳಿ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ – ಕಹಳೆ ನ್ಯೂಸ್

ಮಂಗಳೂರು: ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಆ್ಯಸಿಡ್ ದಾಳಿಯಲ್ಲಿ ಗಾಯಗೊಂಡ ಮೂವರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರು ದಾಖಲಾಗಿರುವ ಖಾಸಗಿ ಆಸ್ಪತ್ರೆಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ ನೀಡಿದ್ದಾರೆ. ಭೇಟಿ ಬಳಿಕ ಮಾತನಾಡಿದ ನಂದನ್ ಮಲ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಕಡಬ ಘಟನೆ ಉದಾಹರಣೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದ್ದು, ಆರೋಪಿಯ ಹಿನ್ನೆಲೆ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬ ಪ.ಪೂ. ಕಾಲೇಜಿನಲ್ಲಿ ಮುಸುಕುದಾರಿ ಯುವಕನಿಂದ ಮೂವರು ವಿದ್ಯಾರ್ಥಿಗಳಿಗೆ ಆ್ಯಸಿಡ್ ದಾಳಿ – ಕಹಳೆ ನ್ಯೂಸ್

ಕಡಬ  : ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಡಬ ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಲೀನಾ ಸಿಬಿ,ಅರ್ಚನಾ ಮತ್ತು ಅಮೃತಾ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಆರೋಪಿ ಮುಸುಕು...
ಕಡಬದಕ್ಷಿಣ ಕನ್ನಡಸುದ್ದಿ

ಸುಬ್ರಹ್ಮಣ್ಯ: ಬಿಳಿನೆಲೆಯ ಮಹಿಳೆಯೋರ್ವರು ಬಸ್ಸಿನಿಂದ ಕೆಳಕ್ಕೆ ಬಿದ್ದು ಗಾಯ- ಕಹಳೆ ನ್ಯೂಸ್

ಕಡಬ: ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಚಾಲಕ ಬಸ್ಸು ಚಲಾಯಿಸಿದ ಪರಿಣಾಮ ಮಹಿಳೆಯೋರ್ವರು ಕೆಳಕ್ಕೆ ಬಿದ್ದು ಗಾಯಗೊಂಡಿರುವ ಘಟನೆ ಸುಬ್ರಹ್ಮಣ್ಯ ಗ್ರಾಮದ ಬಿಲದ್ವಾರದ ಬಳಿ ನಡೆದಿದೆ. ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹೂವಪ್ಪ ಗೌಡರವರ ಪತ್ನಿ ವಸಂತಿ ಎಂ.(42ವ.)ಗಾಯಗೊAಡವರು. ಇವರು ತನ್ನ ಮಗಳೊಂದಿಗೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ (ಕೆಎ 19 ಎಫ್ 3247) ಪ್ರಯಾಣಿಸುತ್ತಿದ್ದವರು ಸುಬ್ರಹ್ಮಣ್ಯ ಬಿಲದ್ವಾರದ ಬಳಿ ಬಸ್ಸಿನ ನಿರ್ವಾಹಕ ಅಡಿವೆಪ್ಪ ಪಟಾಣಿರವರಲ್ಲಿ ತಿಳಿಸಿ ಇಳಿಯುತ್ತಿದ್ದಾಗ ನಿರ್ವಾಹಕ ಗಮನಿಸದೇ ಬಸ್ ಚಲಾಯಿಸಲು...
ಕಡಬದಕ್ಷಿಣ ಕನ್ನಡಸುದ್ದಿಸುಳ್ಯ

ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಯನ್ನು ಬೆನ್ನಟ್ಟಿ ತಿವಿದ ಕಾಡು ಹಂದಿ -ಕಹಳೆ ನ್ಯೂಸ್

ಕಡಬ: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಗೆ ಕಾಡುಹಂದಿ ತಿವಿದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಇಂದು ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವಾಗ ಪೊದೆಯಲ್ಲಿದ್ದ ಕಾಡುಹಂದಿ ಏಕಾಏಕಿ ಧಾಳಿ ನಡೆಸಿತೆನ್ನಲಾಗಿದೆ...
ಕಡಬಸುದ್ದಿ

ಕಡಬ: ಕುಡಿದ ಅಮಲಿನಲ್ಲಿ ಅವಾಂತರ ಸೃಷ್ಟಿಸಿದ ವಿಎ : ಕೆಎಸ್ ಆರ್ ಟಿಸಿ ಬಸ್ ಸೀಟ್ ಅಡಿಯಲ್ಲಿ ಸಕತ್ ನಿದ್ರೆ – ಕಹಳೆ ನ್ಯೂಸ್

ಕಡಬ: ಕುಡಿತದ ಚಟಕ್ಕಾಗಿ ಹಲವು ಬಾರಿ ಹಿರಿಯ ಅಧಿಕಾರಿಗಳಿಂದ ಛೀಮಾರಿ ಹಾಕಿಸಿಕೊಂಡಿದ್ದ ವಿಎ ಫೆ.20ರಂದು ಮತ್ತೆ ಕುಡಿದು ಅವಾಂತರ ಮಾಡಿರುವ ಘಟನೆ ಕಡಬದಲ್ಲಿ ನಡೆದಿದೆ. ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿಎ ಕುಡಿದ ಅಮಲಿನಲ್ಲಿ ಬಸ್ ನಲ್ಲಿ ಬಿದ್ದುಕೊಂಡಿದ್ದಾನೆ. ಇದೆಲ್ಲಾ ನಡೆದದ್ದು, ಸುಬ್ರಹ್ಮಣ್ಯ- ಕಡಬ ಬಸ್ ನಲ್ಲಿ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದ ವಿಎ ನಾಗಸುಂದರ ಕುಡಿದು ಬಸ್ ಸೀಟ್ ಅಡಿಯಲ್ಲಿ ಮಲಗಿ...
ಕಡಬದಕ್ಷಿಣ ಕನ್ನಡಸುದ್ದಿ

ಸರಕಾರಿ ಜಮೀನಿನಲ್ಲಿರುವ ಗುಡಿಸಲು ತೆರವಿಗೆ ಆದೇಶ ; ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ ಕೌಕ್ರಾಡಿ ಗ್ರಾಮದ ವೃದ್ಧ ದಂಪತಿ! – ಕಹಳೆ ನ್ಯೂಸ್

ಕಡಬ: ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ನ್ಯಾಯಾಲಯದಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಕೌಕ್ರಾಡಿಯ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ! ರಾಧಮ್ಮ-ಮುತ್ತುಸ್ವಾಮಿ ದಂಪತಿ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸರಕಾರಿ ಜಾಗದಲ್ಲಿ 6 ವರ್ಷಗಳಿಂದ ವಾಸವಾಗಿದ್ದಾರೆ. ಚಿತ್ರದುರ್ಗದಲ್ಲಿ ಹುಟ್ಟಿ ಬೆಳೆದಿರುವ ಅವರು 6 ವರ್ಷಗಳ ಹಿಂದೆ ಕೆಲಸಕ್ಕಾಗಿ ಆಗಮಿಸಿ, ಕೌಕ್ರಾಡಿಯಲ್ಲೇ ಕೂಲಿ ಕೆಲಸ ಮಾಡುತ್ತಾ ನೆಲೆಸಿ ತಮ್ಮದೇ ಮನೆ ಬೇಕೆಂಬ ಕನಸು ಕಂಡು ತಾವು ಕೂಡಿಟ್ಟ...
1 2 3 4 11
Page 2 of 11