Thursday, July 23, 2026

ಕಡಬ

ಕಡಬಸಂತಾಪಸುದ್ದಿ

ಬೈಕ್ ನಿಯಂತ್ರಣತಪ್ಪಿ ಅಪ್ರಾಪ್ತ ಬಾಲಕ ಮೃತ್ಯು- ಕಹಳೆ ನ್ಯೂಸ್

ಕಡಬ: ಬೈಕ್ ನಲ್ಲಿ ಬರುತ್ತಿದ್ದ ಅಪ್ರಾಪ್ತ ಬಾಲಕನೋರ್ವ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಬಳಿಕ ಮೃತಪಟ್ಟ ಘಟನೆ ಜ.17 ರ ಮುಂಜಾನೆ ಕಡಬದ ಪೇರಡ್ಕದಲ್ಲಿ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಮೃತ ಬಾಲಕ. ಪೇರಡ್ಕದ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಬಾಲಕ ಶುಕ್ರವಾರ ಮುಂಜಾನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ಬರುತ್ತಿದ್ದ...
ಕಡಬದಕ್ಷಿಣ ಕನ್ನಡಸುದ್ದಿ

ಜ.07ರಿಂದ ಶ್ರೀ ಶಿರಾಡಿ ಮತ್ತು ಪರಿವಾರ ದೈವಗಳ ದೈವಸ್ಥಾನದ ಗ್ರಾಮ ದೈವ ಶ್ರೀ ಶಿರಾಡಿ, ಪಂಜುರ್ಲಿ ಮತ್ತು ಮೊಗೇರ ದೈವಗಳ ಪುನಃಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ – ಕಹಳೆ ನ್ಯೂಸ್

ಕಡಬ : ಕಡಬ ತಾಲೂಕಿನ ಕ್ಯೂಲ ಗ್ರಾಮದ ಬರಮೇಲು ಶ್ರೀ ಶಿರಾಡಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಜ.07ರಿಂದ ಗ್ರಾಮ ದೈವ ಶ್ರೀ ಶಿರಾಡಿ, ಪಂಜುರ್ಲಿ ಮತ್ತು ಮೊಗೇರ ದೈವಗಳ ಪುನಃಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ ನಡೆಯಲಿದೆ. ಜ07ರಂದು ಪೂರ್ವಾಹ್ನ ಗಂಟೆ 10.00ಕ್ಕೆ ಹೊರೆಕಾಣಿಕೆ, ಸಂಜೆ ಗಂಟೆ 6.30ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಸ್ವಸ್ತಿ ಪುಣ್ಯಾಹವಾಚನ, ಸ್ಥಳ ಶುದ್ಧಿ, ಪ್ರಾಸಾದ ಶುದ್ಧಿ, ಮಹಾಸುದರ್ಶನ ಹೋಮ, ಪ್ರೇತಾವಾಹನೆ, ಭಾವಾಕರ್ಷಣೆ,...
ಕಡಬದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ರಾಜ್ಯ ಹೊರತುಪಡಿಸಿ ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿ ವರದಿ ನೀಡಿಲ್ಲ : ಸಚಿವೆ ಶೋಭಾ ಕರಂದ್ಲಾಜೆ -ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಫಿಸಿಕಲ್ ಸರ್ವೆ ನಡೆಸಿದಾಗ ಮಾತ್ರ ಯಥಾಸ್ಥಿತಿ ತಿಳಿಯಲಿದೆ. ಆದರೆ ಕೇರಳ ರಾಜ್ಯ ಹೊರತುಪಡಿಸಿ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿ ವರದಿ ನೀಡಿಲ್ಲ ಎಂದು ಕೇಂದ್ರ ಅತಿ ಸಣ್ಣ, ಸಣ್ಣ, ಮಾಧ್ಯಮ ಕೈಗಾರಿಕಾ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕಡಬ ತಾಲೂಕಿನ ಕೇರ್ಪಡದಲ್ಲಿ ಮಾತನಾಡಿದ ಅವರು ಇದು ಹಿಂದಿನವರು ಮಾಡಿರುವ ತಪ್ಪು. ಏರಿಯಲ್ ಸರ್ವೆ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬೆಳ್ಳಂಬೆಳ್ಳಗೆ ಜೈಲಿನಿಂದ ಬಿಡುಗಡೆಗೊಂಡ ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್‌ – ಕಹಳೆ ನ್ಯೂಸ್

ಹೈದರಾಬಾದ್‌ : 'ಪುಷ್ಪಾ 2' ಪ್ರದರ್ಶನದ ವೇಳೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಬ್ಬ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಒಂದು ದಿನದ ನಂತರ ತೆಲುಗು ನಟ ಅಲ್ಲು ಅರ್ಜುನ್ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾದರು. ನಟನನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದರು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತು. ಆದರೆ, ಸಂಜೆ ವೇಳೆಗೆ ತೆಲಂಗಾಣ ಹೈಕೋರ್ಟ್‌ ನಟನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಿನ್ನೆ...
ಕಡಬಬೆಂಗಳೂರುರಾಜ್ಯಸಿನಿಮಾಸುದ್ದಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್​​ ಮತ್ತು ಗ್ಯಾಂಗ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುಷ್ಪ- 2 ಸಿನಿಮಾ ಬಿಡುಗಡೆ ವೇಳೆ ಕಾಲ್ತುಳಿತಕ್ಕೆ ಸಿಕ್ಕಿ ಮಹಿಳೆ ಸಾವು ಪ್ರಕರಣ : ನಟ ಅಲ್ಲು ಅರ್ಜುನ್ ಅರೆಸ್ಟ್‌..!- ಕಹಳೆ ನ್ಯೂಸ್ 

ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣ ಈ ಹಿಂದೆ ಆದ ಘಟನೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಮಹಿಳೆಯೊಬ್ಬರು ಕಾಲ್ತುಳಿತಕ್ಕೆ ಸಿಕ್ಕಿ ಮೃತರಾಗಿದ್ದರು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಪುಷ್ಪ ದಿ ರೂಲ್ ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಶುಕ್ರವಾರ ಇಂದು ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಅವರನ್ನು...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಗುಕೇಶ್  -ಕಹಳೆ ನ್ಯೂಸ್

ಸಿಂಗಾಪುರ : ಸಿಂಗಾಪುರದಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಕೊನೆಯ ಹಾಗೂ 14ನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತದ 18 ವರ್ಷದ ಗ್ರ‍್ಯಾಂಡ್‌ ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ‍್ಯಾಂಡ್‌ಮಾಸ್ಟರ್ ಡಿ ಗುಕೇಶ್ ಗುರುವಾರ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದಾರೆ. 14 ಪಂದ್ಯಗಳ ಕೊನೆಯ ಕ್ಲಾಸಿಕಲ್...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮುಂಬೈಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಗೆ ರಷ್ಯನ್ ಭಾಷೆಯಲ್ಲಿ ದುಷ್ಕರ್ಮಿಗಳಿಂದ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ – ಕಹಳೆ ನ್ಯೂಸ್

ಮುಂಬೈ : ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿ. 13ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. RBI ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ. ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬAಧಿತ ಸೆಕ್ಷನ್‌ಗಳ...
1 2 3 4 5 18
Page 3 of 18