ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ – ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ -ಕಹಳೆ ನ್ಯೂಸ್
ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ ಉಂಟಾಗಿದ್ದು ಈ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿರುವ ಸಲುವಾಗಿ ಇಂದು ದಿನಾಂಕ 14-07-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಜಮಾಡಿ - ನಡಿಪಟ್ನ ಸೇರಿದಂತೆ ಹಲವು ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದ್ದು ತಕ್ಷಣ ತುರ್ತು ಕಾಮಗಾರಿ ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್...







