Saturday, March 7, 2026

ಕಾಪು

ಕಾಪುಸುದ್ದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತು ಇಲಾಖಾಧಿಕಾರಿಗಳೊಂದಿಗೆ ಸಭೆ :ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ– ಕಹಳೆ ನ್ಯೂಸ್

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಸಂಭಂದಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ  ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ದಾರಿದೀಪಗಳ ಸಮರ್ಪಕ ನಿರ್ವಹಣೆ ಮಾಡಬೇಕು ಮತ್ತು ಪಡುಬಿದ್ರಿ ಹಾಗೂ ಕಟಪಾಡಿ ಭಾಗದಲ್ಲಿ ದಿನೇ ದಿನೇ ಅಪಘಾತಗಳು ಹೆಚ್ಚುತ್ತಿದ್ದು ಅಪಘಾತ ತಡೆಗೆ...
ಕಾಪುಸುದ್ದಿ

ಆಸ್ಪೆನ್ ಇನ್ಫ್ರಾ ಕಂಪೆನಿಯ ಸಿ.ಎಸ್.ಆರ್ ನಿಧಿಯಿಂದ ವಿವಿಧ ಸವಲತ್ತು ವಿತರಣೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಭಾರತೀಯ ವಿಕಾಸ್ ಟ್ರಸ್ಟ್ ಸಹಯೋಗದೊಂದಿಗೆ ಪಡುಬಿದ್ರಿಯ ವಿಶೇಷ ಆರ್ಥಿಕ ವಲಯದಲ್ಲಿನ ಆಸ್ಪೆನ್ ಇನ್ಫ್ರಾ ಕಂಪೆನಿಯ ಮೂಲಕ 2023-24 ನೇ ಸಾಲಿನ ಸಿ.ಎಸ್.ಆರ್ ನಿಧಿಯಿಂದ ಅನುಷ್ಠಾನಿಸಲಾದ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿದರು. ಶಾಸಕರು ಮಾತನಾಡಿ ಆಸ್ಪೆನ್ ಇನ್ಫ್ರಾ ಕಂಪೆನಿಯು ಸಂಸ್ಥೆಗೆ ಬಂದ ಲಾಭಾಂಶದ ಪಾಲನ್ನು ಸಮಾಜಕ್ಕೆ ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಶಾಸಕನಾಗಿ ಈ ಸಂಸ್ಥೆಯನ್ನು ಅಭಿನಂದಿಸುತ್ತೇನೆ...
ಕಾಪುಸುದ್ದಿ

ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌ ಇಟ್ಟು ನಾಪತ್ತೆಯಾಗಿದ್ದ ಯುವಕ : ಮೃತದೇಹ ಕಡೆಕಾರು-ಪಡುಕೆರೆ ಬಳಿಯ ಸಮುದ್ರದಲ್ಲಿ ಪತ್ತೆ – ಕಹಳೆ ನ್ಯೂಸ್

ಕಾಪು : ಕಾಪು ಬೀಚ್‌ ಬಳಿ ಬೈಕ್‌, ಮೊಬೈಲ್‌, ಪರ್ಸ್ ಇಟ್ಟು ಯುವಕ ನಾಪತ್ತೆಯಾದ ಯುವಕನ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಇಂದು ಸಂಜೆ ವೇಳೆ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದ ಕರಣ್ ಸಾಲ್ಯಾನ್ ರವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಇಂದು ಮುಂಜಾನೆ ಪತ್ತೆಯಾಗಿತ್ತು.     ಈ ಬಗ್ಗೆ ತಂದೆ ತುಳಸಿ ಸಾಲ್ಯಾನ್‌ರವರು ಕಾಪು...
ಕಾಪುಸುದ್ದಿ

ಬೀಚ್ ಬಳಿ ಬೈಕ್, ಮೊಬೈಲ್ ಬಿಟ್ಟು ಯುವಕ ನಾಪತ್ತೆ –ಕಹಳೆ ನ್ಯೂಸ್

ಕಾಪು : ಕಾಪು ಬೀಚ್ ಬಳಿ ಯುವಕನೋರ್ವ ಬೈಕ್, ಮೊಬೈಲ್ ಇಟ್ಟು ನಾಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ನಾಪತ್ತೆಯಾದ ಯುವಕ. ಈತ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದು ಶುಕ್ರವಾರ ಬೆಳಿಗ್ಗೆ ಕಾಪು ಬೀಚ್ ಬಳಿ ಬೈಕ್, ಬೆಲೆಬಾಳುವ ಫೋನ್, ನಗದು ಸಹಿತವಾಗಿ ಪರ್ಸ್ ಪತ್ತೆಯಾಗಿದೆ.‌ ಮನೆಯವರು ಮತ್ತು ಸ್ಥಳೀಯರು ಕಾಪು ಬೀಚ್ ಬಳಿ, ಸಮುದ್ರ ತೀರ ಮತ್ತು...
ಕಾಪುದಕ್ಷಿಣ ಕನ್ನಡಸುದ್ದಿ

“ಕಾಪು ತಾಲ್ಲೂಕು ಕಚೇರಿಯಲ್ಲಿ ಪರಿಸರ ದಿನ ಆಚರಣೆ ಪರಿಸರವೇ ನಮ್ಮ ಉಸಿರು; ಗಿಡಮರಗಳೇ ನೀವಿದ್ದರೆ ಮಾತ್ರ ನಾವು -ತಹಶಿಲ್ದಾರ್ ಪ್ರತಿಭಾ ಆರ್.-ಕಹಳೆ ನ್ಯೂಸ್

ಕಾಪು :ಈ ದಿನ ತಾಲ್ಲೂಕು ಕಚೇರಿಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.ತಹಶಿಲ್ದಾರ್ ಪ್ರತಿಭಾ ಆರ್ ಮತ್ತು ಪುರಸಭೆ ಮುಖ್ಯ ಅಧಿಕಾರಿ ನಾಗರಾಜ್ ರವರು ಉಪಸ್ಥಿತರಿದ್ದು ಸ್ವತಃ ಗಿಡ ನೆಟ್ಟು ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ತಹಶಿಲ್ದಾರ್ ಕಚೇರಿಯ ಉಪ ತಹಶಿಲ್ದಾರ್ ಗಳಾದ ರವಿಕಿರಣ್, ದೇವಕಿ, ಅಶೋಕ್ ಕೋಟೆಕಾರ್ ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದರು.ತಹಶಿಲ್ದಾರ್ ಕಚೇರಿಯ ಆವರಣದಲ್ಲಿ ಉದ್ಯಾನವನ ನಿರ್ಮಿಸಿ ಸೌಂದರ್ಯೀಕರಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ತಹಶಿಲ್ದಾರ್ ಪ್ರತಿಭಾ ಆರ್...
ಕಾಪುಕ್ರೈಮ್ಸುದ್ದಿ

ಕಾಪು : ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ 6 ಮಂದಿಯನ್ನು ವಶಕ್ಕೆ ಪಡೆದ ಕಾಪು ಪೊಲೀಸರು-ಕಹಳೆ ನ್ಯೂಸ್

ಉಡುಪಿ : ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ ತಂಡವೊಂದನ್ನು ಕಾಪು ಪೊಲೀಸರು ಬಂದಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಪರಂಗಿಪೇಟೆ ಎಂಬವರನ್ನು ಬಂದಿಸಿದ್ದಾರೆ. ಇವರಲ್ಲಿ ಕೆಲವರು ಬೇರೆ ಬೇರೆ ಠಾಣೆಗಳಲ್ಲಿ ರೌಡಿ ಶೀಟರ್ ಹೊಂದಿದವರಾಗಿದ್ದಾರೆ. ಉಡುಪಿಯಿಂದ ಕಾಪು‌ ಕಡೆಗೆ ಬರುತ್ತಿದ್ದ...
ಕಾಪುಸುದ್ದಿ

ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಯೋಗೀಶ್ ಎಸ್. ಕೋಟ್ಯಾನ್ ಗ್ರಾಮ ಪಂಚಾಯತ್ ಸದಸ್ಯರು ಉದ್ಯಾವರ ಇವರ ವತಿಯಿಂದ "ಉಚಿತ ಬರವಣಿಗೆ ಪುಸ್ತಕ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ" ಉದ್ಯಾವರ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಾಂಕೇತಿಕವಾಗಿ ಉಚಿತ ಬರವಣಿಗೆ ಪುಸ್ತಕಗಳನ್ನು ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉದ್ಯಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ...
ಕಾಪುಶಿಕ್ಷಣಸುದ್ದಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯ 2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ –ಕಹಳೆ ನ್ಯೂಸ್

ಕಾಪು : ಸರಸ್ವತಿ ಮಂದಿರ ಶಾಲೆ, ಉಚ್ಚಿಲ ಇದರ 2024-25 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದರು. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕರು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್, ಶಿಲ್ಪಾ ಜಿ ಸುವರ್ಣ, ಶಾಲಾ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯ ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು....
1 8 9 10 11 12
Page 10 of 12