ಬೈಂದೂರು ತಾಲೂಕಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮ
ಬೈಂದೂರು ಉತ್ಸವ – 2026ರಲ್ಲಿ ಸೇವಾಭಾರತಿ ತಂಡ ಭಾಗವಹಿಸುವಿಕೆ ಬೈಂದೂರು ತಾಲೂಕಿನ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮದಲ್ಲಿ ಸೇವಾಭಾರತಿ ತಂಡ ಭಾಗವಹಿಸಿತು. ಉತ್ಸವದ ಅಂಗವಾಗಿ ಸಂಸ್ಥೆಯ ಮಳಿಗೆಯನ್ನು ತೆರೆಯಲಾಗಿದ್ದು, ಸಂಸ್ಥೆಯ ಕರಪತ್ರ, ವಾರ್ಷಿಕ ವರದಿ ಹಂಚಿ, ಸಂಸ್ಥೆಯ ವಿವಿಧ ಯೋಜನೆಗಳ ಸೇವಾ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಯಿತು. ಬೈಂದೂರು ಉತ್ಸವದಲ್ಲಿ ಸಂಸ್ಥೆಯ ಖಜಾಂಚಿ ಹಾಗೂ ಸೇವಾಧಾಮದ...







