Tuesday, July 28, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಧಾತ್ರಿ ಕಲಾವಿದೆ‌ರ್ ಕುಡ್ಲ ಕಲಾ ಸಂಸ್ಥೆಯ ಆಶ್ರಯದಲ್ಲಿ ನಾಳೆ ವಿಧಾತ್ರಿ ಸಂಭ್ರಮ -2026; ‘ಜೈ ಹನುಮಾನ್‌’ ನಾಟಕ ಪ್ರದರ್ಶನ -ಕಹಳೆ ನ್ಯೂಸ್

ಮಂಗಳೂರು : ಕಳೆದ 17 ವರ್ಷಗಳಿಂದ ತುಳು ರಂಗಭೂಮಿಯಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವಿಧಾತ್ರಿ ಕಲಾವಿದೆರ್ ಕುಡ್ಲ (ರಿ.) ಸಂಸ್ಥೆಯ ವತಿಯಿಂದ ವಿಧಾತ್ರಿ ಸಂಭ್ರಮ-2026 ಕಾರ್ಯಕ್ರವು ಜೂ. 28ರಂದು ಸಂಜೆ 4:30ಕ್ಕೆ ನಗರದ ಪುರಭವನ (ಟೌನ್‌ಹಾಲ್) ನಲ್ಲಿ ಜರಗಲಿದೆ ಮತ್ತು ಚಿದಾನಂದ ಅದ್ಯಪಾಡಿ ಸಾರಥ್ಯದಲ್ಲಿ, ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ, ಭರತ್ ಎಸ್. ಕರ್ಕೇರ ರಚನೆಯ ತುಳು ಮತ್ತು ಕನ್ನಡ ಭಾಷೆಯಲ್ಲಿ ರಚನೆಯಾದ 'ಜೈ ಹನುಮಾನ್' ನಾಟಕ ಪ್ರದರ್ಶನ ನಡೆಯಲಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬೈಕ್ ಸವಾರ ಗಂಭೀರ ಗಾಯ – ಕಹಳೆ ನ್ಯೂಸ್

ಮಂಗಳೂರು : ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಪಿ.ಎ. ಕಾಲೇಜಿನ ಬಸ್ ನಾಟೆಕಲ್ ತಿರುವಿನಲ್ಲಿ ದ್ವಿಚಕ್ರ ವಾಹನವನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಚಿಕ್ಕಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಆದರೆ ದ್ವಿಚಕ್ರ ವಾಹನ ಸವಾರ ಕೆಲಕಾಲ ಬಸ್‌ನಡಿ ಸಿಲುಕಿಕೊಂಡಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಕ್ರೇನ್ ತರಿಸಿ ಬಸ್‌ನ್ನು ಮೇಲಕ್ಕೆತ್ತಿ ಸವಾರನನ್ನು ಹೊರತೆಗೆದರು.ಗಂಭೀರ ಗಾಯಗೊಂಡ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೆಂದೂರು ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟ ಯತ್ನ- 35.53 ಗ್ರಾಂ ಮಾದಕ ವಸ್ತು ಸಮೇತ ಮೂವರು ಬಂಧನ -ಕಹಳೆ ನ್ಯೂಸ್

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಮಾದಕ ವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ನದೀಂ (27), ಉಮರುಲ್ ಫಾರೂಕ್ (30) ಹಾಗೂ ಇಮ್ಮಿಯಾಜ್ ಇಸ್ಮಾಯಿಲ್ ಕಿನ್ಯಾ (41) ಎಂದು ಗುರುತಿಸಲಾಗಿದೆ.ಜೂನ್ 23ರಂದು ಮಂಗಳೂರು ನಗರದ ಬೆಂದೂರಿನಲ್ಲಿರುವ ಲಾಡ್ಜ್ ಒಂದರಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಜನಾಡಿ ಭೀಕರ ಗುಡ್ಡ ಕುಸಿತ: ನೊಂದ ಅಶ್ವಿನಿ ಮನೆಗೆ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ  ಭೇಟಿ ; ನ್ಯಾಯದ ಹೋರಾಟದಲ್ಲಿ ಸದಾ ಜೊತೆಗಿರುವ ಅಭಯ – ಕಹಳೆ ನ್ಯೂಸ್

ಮಂಗಳೂರು: ಕಳೆದ ವರ್ಷ ಮಂಗಳೂರು ಸಮೀಪದ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ತನ್ನ ಇಡೀ ಪ್ರಪಂಚವನ್ನೇ ಕಳೆದುಕೊಂಡು, ಅತೀವ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ನೊಂದ ಮಹಿಳೆ ಶ್ರೀಮತಿ ಅಶ್ವಿನಿ ಅವರ ಮನೆಗೆ ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಇಂದು ಖುದ್ದಾಗಿ ಭೇಟಿ ನೀಡಿ ಸಾಂತ್ವನ ಹೇಳಿದರು. ಕರುಳು ಹಿಂಡುವ ಈ ದುರಂತದ ಬಳಿಕ ಚಿಂತಾಜನಕ ಪರಿಸ್ಥಿತಿಯಲ್ಲಿರುವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಜೂನ್ ಅಂತ್ಯಕ್ಕೆ ಬೆಂಗಳೂರು-ಮಂಗಳೂರು ವಂದೇ ಭಾರತ್ ಘಾಟ್ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ -ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕದ ಕರಾವಳಿ ಪ್ರದೇಶ ಮತ್ತು ರಾಜ್ಯ ರಾಜಧಾನಿ ಬೆಂಗಳೂರು ನಡುವಿನ ಹೈಸ್ಪೀಡ್ ರೈಲು ಸಂಪರ್ಕದ ಕನಸನ್ನು ನನಸಾಗಿಸುವತ್ತ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ ಸವಾಲಿನ 55 ಕಿಮೀ ಘಾಟ್ ವಿಭಾಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಪ್ರಾಯೋಗಿಕ ಸಂಚಾರ ಜೂನ್ ಕೊನೆಯ ವಾರದಲ್ಲಿ ನಡೆಯುವ ಸಾಧ್ಯತೆಯಿದೆ. ರೈಲ್ವೆ ಸಚಿವಾಲಯದ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ ಈ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಲಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಮೀನು ಕೊರತೆ, ಯುದ್ಧದ ಪರಿಣಾಮ – ಮೊಟ್ಟೆ ದರ 8 ರೂ. ಗಡಿ ದಾಟಿತು -ಕಹಳೆ ನ್ಯೂಸ್

ಮಂಗಳೂರು : ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಸಾಮಾನ್ಯವಾಗಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗುತ್ತದಾದರೂ, ಈ ಬಾರಿ ಜಾಗತಿಕ ಪರಿಸ್ಥಿತಿ ಹಾಗೂ ಉತ್ಪಾದನಾ ವೆಚ್ಚ ಏರಿಕೆಯೂ ದರ ಹೆಚ್ಚಳಕ್ಕೆ ಕಾರಣವಾಗಿದೆ. ಕೋಳಿಗಳಿಗೆ ನೀಡುವ ಔಷಧಗಳ ಬೆಲೆ ಹೆಚ್ಚಳ ಹಾಗೂ ಮೆಕ್ಕೆಜೋಳ ದರ ಏರಿಕೆಯಿಂದ ಮೊಟ್ಟೆಯ ಬೆಲೆ ಒಂದಕ್ಕೆ 8 ರೂಪಾಯಿ ಗಡಿ ದಾಟಿದೆ. ಬದಲಾಗುತ್ತಿರುವ ಹವಾಮಾನವೂ ಮೊಟ್ಟೆ ಉತ್ಪಾದನೆಗೆ ಹೊಡೆತ ನೀಡಿದೆ. ಶಾಲೆಗಳು ಆರಂಭವಾಗಿರುವುದರಿಂದ ಬೇಡಿಕೆ ಹೆಚ್ಚಿದ್ದು, ಮೀನು ಲಭ್ಯತೆ ಕಡಿಮೆಯಾಗಿರುವ ಹಿನ್ನೆಲೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಯಶೋಧಾ ರಾಜೇಶ್‌ಗೆ ಅಂತರರಾಷ್ಟ್ರೀಯ ಕಿರೀಟ: ಥೈಲ್ಯಾಂಡ್‌ನಲ್ಲಿ ‘ಮಿಸೆಸ್ ಟೂರಿಸಂ ಇಂಟರ್‌ನ್ಯಾಷನಲ್ ಟ್ಯಾಲೆಂಟ್ ಕ್ವೀನ್ 2026’ ಪ್ರಶಸ್ತಿ -ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮೂಲದ ಉದ್ಯಮಿ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಯಶೋಧಾ ರಾಜೇಶ್ ಅವರು ಥೈಲ್ಯಾಂಡ್‌ನ ಹುವಾ ಹಿನ್‌ನಲ್ಲಿ ನಡೆದ ಪ್ರತಿಷ್ಠಿತ ಮಿಸೆಸ್ ಟೂರಿಸಂ ಇಂಟರ್‌ನ್ಯಾಷನಲ್ 2026 ಸ್ಪರ್ಧೆಯಲ್ಲಿ “ಮಿಸೆಸ್ ಟೂರಿಸಂ ಇಂಟರ್‌ನ್ಯಾಷನಲ್ ಟ್ಯಾಲೆಂಟ್ ಕ್ವೀನ್ ವಿನ್ನರ್ 2026” ಎಂಬ ಅಂತರರಾಷ್ಟ್ರೀಯ ಗೌರವವನ್ನು ತಮ್ಮದಾಗಿಸಿಕೊಂಡು ಕರ್ನಾಟಕ ಹಾಗೂ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಜಗತ್ತಿನ ವಿವಿಧ ದೇಶಗಳಿಂದ ಆಗಮಿಸಿದ್ದ 22 ಸ್ಪರ್ಧಿಗಳ ನಡುವೆ ನಡೆದ ಕಠಿಣ ಸ್ಪರ್ಧೆಯಲ್ಲಿ ಯಶೋಧಾ ರಾಜೇಶ್ ಅವರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಸ್‌ನಂತೆಯೇ ಬಸ್ ತಂಗುದಾಣ! ಗುರುಪುರದ ಬಂಡಸಾಲೆಯಲ್ಲಿ ಹೊಸ ಆಕರ್ಷಣೆ -ಕಹಳೆ ನ್ಯೂಸ್

ಮಂಗಳೂರು : ನಗರ ಹೊರವಲಯದ ಗುರುಪುರ ಸಮೀಪದ ಬಂಡಸಾಲೆ ಎನ್ನುವಲ್ಲಿ V2 Guys ಗುರುಪುರ ಯುವ ಬಳಗವೂ ಹೊಸ ರೀತಿಯಲ್ಲಿ ನಿರ್ಮಿಸಿದ ಬಸ್ ತಂಗುದಾಣ ಜನ ಮನ ಸೆಳೆಯುತ್ತಿದೆ. ಬಸ್ ರೀತಿಯಲ್ಲೇ ನಿರ್ಮಿಸಿದ ಬಸ್ ತಂಗುದಾಣ ವಿಶೇಷ ರೀತಿಯಲ್ಲಿ ನಿರ್ಮಾಣಗೊಂಡ ಬಂಡಸಾಲೆ ತಂಗುದಾಣ ಆಕರ್ಷಣೀಯವಾಗಿ ರೂಪುಗೊಂಡಿದೆ. ಸುಮಾರು 7 ಲಕ್ಷ ಮೊತ್ತದಲ್ಲಿ ಈ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಈ ಹಿಂದೆ ಇಲ್ಲಿದ್ದ ಬಸ್ ತಂಗುದಾಣ ಪಾಳು ಬಿದ್ದಿತ್ತು....
1 2 3 4 114
Page 2 of 114