ವಿವಿ ಕಾಲೇಜಿನಲ್ಲಿ ʼಪರಿಸರ ಅಧ್ಯಯನʼ ಪುಸ್ತಕ ಬಿಡುಗಡೆ-ಕಹಳೆ ನ್ಯೂಸ್
ಮಂಗಳೂರು : ನಗರದ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ʼಪರಿಸರ ಅಧ್ಯಯನʼ ಎಂಬ ಕನ್ನಡ ಪುಸ್ತಕವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್. ಬಿಡುಗಡೆ ಮಾಡಿದರು. ಮಂಗಳೂರು ವಿಶ್ವವಿದ್ಯಾಲಯದ ಪಠ್ಯಕ್ರಮಕ್ಕೆ ಅನುಗುಣವಾಗಿ ಡಾ. ಸಿದ್ದರಾಜು ಎಂ. ಎನ್. ಮತ್ತು ಡಾ. ವಿನಾಯಕ ಅವರು ರಚಿಸಿದ್ದಾರೆ. ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ, ವಿದ್ಯಾರ್ಥಿಗಳಿಗೆ ತಾವು ಮಾತನಾಡುವ ಭಾಷೆಯಲ್ಲಿ ಅಧ್ಯಯನ ಮಾಡುವ ಅವಕಾಶ...







