Tuesday, March 17, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನೇತ್ರಾವತಿ ಸೇತುವೆ ದುರಸ್ತಿ ಕಾಮಗಾರಿ: ಏ.1ರಿಂದ ಮಾರ್ಗ ಬದಲಾವಣೆ-ಕಹಳೆ ನ್ಯೂಸ್

ಮಂಗಳೂರು: ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ - ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಏಪ್ರಿಲ್‌ 1ರಿಂದ 30ರ ವರೆಗೆ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ ಒಂದು ಸೇತುವೆಯಲ್ಲಿ ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪ್‌ವೆಲ್‌ನಿಂದ ತೊಕ್ಕೊಟ್ಟುವರೆಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ವಿವಿ ಕಾಲೇಜಿನಲ್ಲಿ ಮಜ್ಜಿಗೆ ಹಬ್ಬ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು, ಮಾ. 29: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸೂಕ್ಷ್ಮಾಣುಜೀವ ಶಾಸ್ತ್ರ ವಿಭಾಗದ ವತಿಯಿಂದ ಮಜ್ಜಿಗೆ ಹಬ್ಬವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಭಾರತದ ಸೂಕ್ಷ್ಮಾಣುಜೀವ ಶಾಸ್ತ್ರ ಸಮಾಜದ ಸಂಸ್ಥಾಪಕ ಅಧ್ಯಕ್ಷ ಡಾ. ದೇಶ್ಮುಖ್ ಅವರು ಉದ್ಘಾಟಿಸಿ, ಜನರು ಟೀ, ಕಾಫಿ ಅಥವಾ ಇತರ ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವ ಬದಲು ಆರೋಗ್ಯಕರ ಮಜ್ಜಿಗೆ ಕುಡಿಯುವಂತೆ ಪ್ರೋತ್ಸಾಹಿಸಲು ಈ ಅಭಿಯಾನ ಪ್ರಾರಂಭಿಸಿರುವುದಾಗಿ ತಿಳಿಸಿದರು. ಮಜ್ಜಿಗೆ ಸುಲಭವಾಗಿ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. ಅಲ್ಲದೇ, ಆರೋಗ್ಯಕರ ಪಾನೀಯವಾಗಿದ್ದು, ಸಾಕಷ್ಟು...
ಅಂಕಣದಕ್ಷಿಣ ಕನ್ನಡಪುತ್ತೂರುಮಂಗಳೂರುಸಿನಿಮಾಸುದ್ದಿ

ರವಿ ರಾಮಕುಂಜ ಅವರು ನಟನಾ ಕಲೆಗೆ ಬರಲು ದೊಡ್ಡ ತಿರುವು ಯಾವುದು ಗೊತ್ತಾ..? ಅದ್ಭುತ ಕಲಾವಿದ ರವಿ ರಾಮಕುಂಜ..!! – ಕಹಳೆ ನ್ಯೂಸ್

ಇವರು ಸ್ಟೇಜ್ ಮೇಲೆ ಬಂದ್ರು ಅಂದ್ರೆ ಹಾಸ್ಯದ ರಸದೌತಣ, ಸಿನಿಮಾದಲ್ಲಿ ಇವರಿದ್ದಾರೆ ಅಂದ್ರೆ ನಗುವೇ ಕಾರಣ. ಅಂತಹ ಒಬ್ಬ ಅದ್ಭುತ ಕಲಾವಿದರೇ ರವಿ ರಾಮಕುಂಜ. ಹೌದು ಸಿನಿಮಾ ಸೀರಿಯಲ್, ರಿಯಾಲಿಟಿ ಶೋಗಳ ಮೂಲಕ ತನ್ನದೇ ಆದ ನಟನೆಯ ಮೂಲಕ ಪ್ರಖ್ಯಾತಿಯನ್ನು ಪಡೆದ ರವಿರಾಮಕುಂಜ ಅವರು ಹುಟ್ಟಿದ್ದು ರಾಮಕುಂಜ ಗ್ರಾಮದಲ್ಲಿ. ಪಿಯುಸಿ ಶಿಕ್ಷಣವನ್ನು ಪಡೆದಿರುವ ಇವರು ಬಡತನದಲ್ಲೇ ಹುಟ್ಟಿ ಬೆಳದವರು. ಇವರಿಗೆ ಜೀವನದ ದಾರಿ ತೋರಿಸಿದ್ದು ತುಳು ರಂಗಭೂಮಿ. ಐದನೇ ತರಗತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋಹತ್ಯೆ, ಗೋಸಾಗಾಟ ಮಾಡುವವರ ಆಸ್ತಿ ಮುಟ್ಟುಗೋಲು ಅಸ್ತ್ರ ಬಳಸಿ ಡಾ. ಭರತ್ ಶೆಟ್ಟಿ ವೈ ಅಗ್ರಹ -ಕಹಳೆ ನ್ಯೂಸ್

ಕಾವೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಗೋ ಹತ್ಯೆ, ಗೋ ಸಾಗಾಟ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸ್ ಇಲಾಖೆಯ ಬದಲು ಬಜರಂಗದಳ ಸಂಘಟನೆ ಪತ್ತೆ ಮಾಡಿ ಕೊಡುವಂತಹ ಪರಿಸ್ಥಿತಿ ಉಂಟಾಗಿದೆ. ಅಪರಾಧಿಗಳು ಭಯವಿಲ್ಲದೆ ಹಾಡು ಹಗಲೇ ರಾಜಾರೋಷವಾಗಿ ಸಾಗಾಟ ಮಾಡುತ್ತಿದ್ದು,ರಾಜ್ಯದಲ್ಲಿ ಕಾನೂನು ಇದೆಯೆ ಎಂಬ ಬಗ್ಗೆ ಅನುಮಾನ ಉಂಟಾಗುತ್ತಿದ್ದು, ಅಕ್ರಮ ಗೋಸಾಗಾಟ ಗೋಹತ್ಯೆಯ ಪ್ರಕರಣಗಳನ್ನು ನಿರ್ಲಕ್ಷ್ಯಮಾಡುವುದರಿಂದ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರಬಹುದು ಎಂದು ಡಾ. ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಿಲಿಕುಳ ಜೈವಿಕ ಉದ್ಯಾನವನ ತಾತ್ಕಾಲಿಕವಾಗಿ ಮುಚ್ಚಲು ಪಿಐಎಲ್‌-ಕಹಳೆ ನ್ಯೂಸ್

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನದಲ್ಲಿ ನಿಯಮ ಉಲ್ಲಂಘನೆಯಾಗುತ್ತಿದ್ದು, ನಿರ್ವಹಣೆ ಸರಿಯಾಗಿಲ್ಲ, ಇದರಿಂದ ಅಲ್ಲಿರುವ ಪ್ರಾಣಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚಬೇಕು ಎಂದು ಬಾಂಬೆ ನ್ಯಾಚುರಲ್‌ ಹಿಸ್ಟರಿ ಸೊಸೈಟಿ(ಬಿಎನ್‌ಎಚ್‌ಎಸ್‌) ಎನ್ನುವ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದೆ. ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿ ಇತ್ಯರ್ಥಗೊಳ್ಳುವವರೆಗೆ ಪಿಲಿಕುಳ ಜೈವಿಕ ಉದ್ಯಾನವನವನ್ನು ಮುಚ್ಚಬೇಕು ಎಂದು ಕೋರಲಾಗಿದೆ. ಕಳೆದ ಅಕ್ಟೋಬರ್‌ 31ರಂದು ಮಂಗಳೂರಿನ ವನ್ಯಜೀವಿ ಸಂರಕ್ಷಣಾಸಕ್ತ ಭುವನ್‌ ಹಾಗೂ ಹೈಕೋರ್ಟ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋ ಸಾಗಾಟಕ್ಕೆ ಬಜರಂಗದಳ ತಡೆ;25 ಗೋವುಗಳ ರಕ್ಷಣೆ -ಕಹಳೆ ನ್ಯೂಸ್

ಮಂಗಳೂರು: ಅಕ್ರಮ ಗೋ ಸಾಗಾಟಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತೆ ತಡೆಯೊಡ್ಡಿರುವ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ(ಮಾ.28) ನಡೆದಿದೆ. ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಘಟನೆ ವೇಳೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಕಟ್ಟಿಗೆ ಸಾಗಾಟದ ವಾಹನ ವಶ -ಕಹಳೆ ನ್ಯೂಸ್

ಕೈಕಂಬ: ಅನುಮತಿ ಇಲ್ಲದೆ ವಿವಿಧ ಜಾತಿಯ ಕಟ್ಟಿಗೆಯನ್ನು ಸಾಗಿಸುತ್ತಿದ್ದ ಲಾರಿಯನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿ ಕಾರಿಗಳು ಬಡಗುಳಿಪಾಡಿ ಗ್ರಾಮದ ಗಂಜಿಮಠದಲ್ಲಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಟ್ಟಿಗೆಯನ್ನು ಮೂಡುಬಿದಿರೆ ಕಡೆಯಿಂದ ಮಂಗಳೂರಿಗೆ ಸಾಗಿಸಲಾಗುತ್ತಿತ್ತು. ವಶಕ್ಕೆ ಪಡೆದ ಕಟ್ಟಿಗೆ ಮತ್ತು ವಾಹನದ ಮೌಲ್ಯ 2.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ವಾಹನ ಚಾಲಕ ಹಮೀದ್‌ ವಾಲ್ಪಾಡಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಗೆ ಹಾಜರಾಗಲು ನೋಟಿಸ್‌ ನೀಡಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋಸಾಗಾಟಗಾರರ ಹೆಡೆಮುರಿ ಕಟ್ಟಿ :- ಶಾಸಕ ಕಾಮತ್ ಆಗ್ರಹ-ಕಹಳೆ ನ್ಯೂಸ್

ಮಂಗಳೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟದ ಜಾಲವು ವಿಸ್ತಾರಗೊಂಡಿದ್ದು ಕಳೆದ ಒಂದು ವಾರದಲ್ಲಿ ಹಿಂದೂ ಸಂಘಟನೆಗಳ ಮಾಹಿತಿಯ ಮೇರೆಗೆ ಪೊಲೀಸರು ನಾಲ್ಕೈದು ಕಡೆ ವಾಹನಗಳನ್ನು ತಡೆದು ಒಂದು ಟನ್ ಗೂ ಅಧಿಕ ಗೋಮಾಂಸವನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸ್ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿ ಸಮಾಜದ ಸ್ವಾಸ್ಥ್ಯ ಕದಡುವವರ ಹೆಡೆಮುರಿ ಕಟ್ಟಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಈ ಹಿಂದೆ ಕುದ್ರೋಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಸಾಯಿಖಾನೆಯು ರಾಜ್ಯ ಮಾಲಿನ್ಯ ಮಂಡಳಿಯ ಆದೇಶದಂತೆ ಸ್ಥಗಿತವಾಗಿ...
1 36 37 38 39 40 106
Page 38 of 106