ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ..!! – ಕಹಳೆ ನ್ಯೂಸ್
ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್...







