ಚಾರ್ಮಾಡಿ ಘಾಟಿ ಕಾಮಗಾರಿ: ಗುತ್ತಿಗೆದಾರರ ಬದಲಿಸಲು ಆಗ್ರಹ-ಕಹಳೆ ನ್ಯೂಸ್
ಮಂಗಳೂರು: ಚಾರ್ಮಾಡಿ ಘಾಟಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಯ ಇನ್ನೂ ಆರಂಭವಾಗಿಲ್ಲ. ಇದರ ಗುತ್ತಿಗೆದಾರರು ಕೆಲಸವನ್ನು ಗಡುವಿನೊಳಗೆ ಪೂರ್ಣಗೊಳಿಸುವ ಲಕ್ಷಣಗಳು ಕಾಣಿಸುತ್ತಿಲ್ಲ. ಹಾಗಾಗಿ ಗುತ್ತಿಗೆದಾರರನ್ನು ಬದಲಾಯಿಸಬೇಕು ಎಂದು ಜಿಲ್ಲೆಯ ಶಾಸಕರು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಒತ್ತಾಯಿಸಿದರು. ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆಗಾಗಿ ಸಚಿವರ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಶಾಸಕ ಹರೀಶ ಪೂಂಜ, 'ಕಾಮಗಾರಿ ಗುತ್ತಿಗೆ ಪಡೆದ ಸಂಸ್ಥೆ ಈ ಹಿಂದೆಯೂ...






