ಸರಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು ಇಲ್ಲಿ ನೂತನವಾಗಿ ನಿರ್ಮಾಣಗೊಂಡ ವಿವೇಕ ತರಗತಿ ಕೊಠಡಿ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್-ಕಹಳೆ ನ್ಯೂಸ್
ಸರಕಾರಿ ಪದವಿ ಪೂರ್ವ ಕಾಲೇಜು, ನಾಲ್ಯಪದವು, ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂಟು ವಿವೇಕ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಈ ಎಂಟು ಕೊಠಡಿಗಳು ಮಾತ್ರವಲ್ಲದೇ ಇಲ್ಲಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕೊಠಡಿಗಳಿಗೆ ಒಟ್ಟಾರೆಯಾಗಿ 2.60 ಕೋಟಿ ರೂಪಾಯಿ ಅನುದಾನ ಮಂಜೂರುಗೊಳಿಸಿ ಭೂಮಿಪೂಜೆ ನೆರವೇರಿಸಲಾಗಿತ್ತು. ಇದೀಗ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆಗೊಂಡಿರುವ ಕಾಲೇಜಿನ ವಿವೇಕ...







