Wednesday, May 22, 2024

ಮಡಿಕೇರಿ

ಕೊಡಗುಬೆಂಗಳೂರುಮಡಿಕೇರಿರಾಜಕೀಯರಾಜ್ಯಸುದ್ದಿ

” ನಾನು ಕೊಡಗಿಗೆ ಹೋದಾಗ ಐದು ಬಾರಿ ಪ್ರತಿಭಟನೆ ನಡೆದಿದೆ. ಒಂದು ಕಡೆ ಬಟ್ಟೆಯಲ್ಲಿ ಕಲ್ಲು ಕಟ್ಟಿಕೊಂಡು ದಾಳಿಯಾಗಿದೆ – ನಾಲ್ಕು ದಿನ ನಿಷೇಧಾಜ್ಞೆ ಹಿನ್ನೆಲೆ, ಮಡಿಕೇರಿ ಚಲೋ ಪ್ರತಿಭಟನಾ ರ್‍ಯಾಲಿಯನ್ನು ಮುಂದೂಡುತ್ತೇವೆ ” ವಿಪಕ್ಷ ನಾಯಕ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಬೆಂಗಳೂರು : ನಾವು ಪಾದಯಾತ್ರೆ ನಡೆಸುತ್ತಿರುವುದು ಕೊಡವರ ವಿರುದ್ಧ ಅಲ್ಲ ಎಂಬ ಸ್ಪಷ್ಟೀಕರಣದೊಂದಿಗೆ ಮಡಿಕೇರಿ ಚಲೋ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ವಿಷಯ ತಿಳಿಸಿದ ಅವರು ಮಡಿಕೇರಿ ಚಲೋ ಮುಂದೂಡಿರುವುದಾಗಿ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇನ್ನು...
ಕೊಡಗುಮಡಿಕೇರಿರಾಜಕೀಯರಾಜ್ಯಸುದ್ದಿ

ಕೊಡಗಿನಲ್ಲಿ ಕಾಂಗ್ರೆಸ್ ಗೆ ಶಾಕ್ – 26ರಂದು ಕಾಂಗ್ರೆಸ್ ಪಕ್ಷದಿಂದ ಮಡಿಕೇರಿ ಚಲೋ – ಕೊಡಗಿನಲ್ಲಿ 4 ದಿನಗಳ ಕಾಲ 144 ಸೆಕ್ಷನ್ ನಿಷೇಧಾಜ್ಞೆ ; ಮದ್ಯ ಮಾರಾಟ ನಿಷೇಧ – ಕಹಳೆ ನ್ಯೂಸ್

ಮಡಿಕೇರಿ: ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ರಾಜಕೀಯ ಮೇಲಾಟ, ಕಿತ್ತಾಟದ ನಡುವೆ ಕೊಡಗಿನಲ್ಲಿ ನಾಳೆಯಿಂದ ಶನಿವಾರದವರೆಗೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. ಕೊಡಗಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದು, 2 ಪಕ್ಷಗಳು ಪ್ರತಿಭಟನೆಯನ್ನು ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ನಾಳೆಯಿಂದ ಆ.27ರವರೆಗೆ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಜಾರಿಗೊಳಿಸಿದ್ದು, ಈ...
ಮಡಿಕೇರಿಸುದ್ದಿ

ಮಡಿಕೇರಿ- ಮಂಗಳೂರು ಪರ್ಯಾಯ ರಸ್ತೆ ಕುಸಿತದ ಭೀತಿ..!! ಸಂಚಾರ ನಿರ್ಬಂಧ- ಕಹಳೆ ನ್ಯೂಸ್

ಸುಳ್ಯ: ಮಡಿಕೇರಿ-ಮಂಗಳೂರು ಪರ್ಯಾಯ ರಸ್ತೆಗೂ ಕುಸಿತದ ಭೀತಿ ಎದುರಾಗಿದ್ದು ಮಡಿಕೇರಿ ಪೊಲೀಸರು ತಾಳತ್ತಮನೆ ಸಮೀಪ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಿದ ಪರಿಣಾಮ ಮಂಗಳೂರಿನಿ0ದ ಮಡಿಕೇರಿ ಮೂಲಕ ಬೆಂಗಳೂರು, ಮೈಸೂರು, ಮಡಿಕೇರಿ ಮತ್ತಿತರ ಸ್ಥಳಗಳಿಗೆ ಹೊರಟ ಎಲ್ಲ ಪ್ರಯಾಣಿಕರು ಇದೀಗ ಸಂಪಾಜೆಯ ಗೇಟ್ ಬಳಿ ಸಿಲುಕಿಕೊಂಡಿದ್ದಾರೆ. ಸಂಪಾಜೆ ಗೇಟ್ ಬಂದ್ ಮಾಡಲಾಗಿದ್ದು ಯಾವುದೇ ವಾಹನವನ್ನು ಮಡಿಕೇರಿ ಕಡೆಗೆ ಬಿಡುತ್ತಿಲ್ಲ ಎಂದು ತಿಳಿದು ಬಂದಿದೆ. ಮಡಿಕೇರಿ –ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ...
ಉಡುಪಿಕೊಡಗುದಕ್ಷಿಣ ಕನ್ನಡಮಡಿಕೇರಿಸುದ್ದಿ

ನಾಳೆ ಕೊಡಗು , ದಕ್ಷಿಣ ಕನ್ನಡ ಸೇರಿದಂತೆ ಮಳೆ ಪೀಡಿತ ನಾಲ್ಕು ಜಿಲ್ಲೆಗಳಿಗೆ ನಾಳೆ ಸಿಎಂ ಬೊಮ್ಮಾಯಿ ಭೇಟಿ – ಕಹಳೆ ನ್ಯೂಸ್

ಬೆಂಗಳೂರು (ಜು. 11): ರಾಜ್ಯದಲ್ಲಿ ಕಳೆದ 10 ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಮಳೆಯಿಂದ ಸಾಕಷ್ಟು ಜಿಲ್ಲೆಗಳಲ್ಲಿ ಭೂಕುಸಿತ ಮನೆಗೆಳಿಗೆ ಹಾನಿ ಸೇರಿದಂತೆ ಅಪಾರ ಪ್ರಮಾಣದಲ್ಲಿ‌ ಆಸ್ತಿಪಾಸಿಗಳು ಹಾನಿಯಾದ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಮಳೆ ಹಾನಿ ಪೀಡಿತ ಜಿಲ್ಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಾಳೆಯಿಂದ ಎರಡು ದಿನಗಳ ಕಾಲ ನಾಲ್ಕು ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಭೇಟಿ‌ ನೀಡಿ ಮಳೆ ಹಾನಿ ಸಂತ್ರಸ್ತರ ಅಹವಾಲು...
ಮಡಿಕೇರಿಸುದ್ದಿ

ಮಂಗಳೂರು- ಮಡಿಕೇರಿ ಹೆದ್ದಾರಿಯಲ್ಲಿ ಭೂ ಕುಸಿತ – ಕಹಳೆ ನ್ಯೂಸ್

ಮಡಿಕೇರಿ: ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಕೊಡಗಿನ ಮದೆನಾಡು ಜೋಡುಪಾಲ ಬಳಿ ಮಣ್ಣು ಕುಸಿದು ಬಿದ್ದಿದೆ. ಇದರಿಂದ ಸಂಚಾರಕ್ಕೆ ಸ್ವಲ್ಪ ಅಡಚಣೆ ಎದುರಾಗಿದೆ. ಮಣ್ಣು ತೆರವುಗೊಳಿಸುವ ಪ್ರಕ್ರಿಯೆ ಮುಂದುವರಿದಿದೆ. ಇದೇ ವೇಳೆ ಕೊಡಗಿನ ಹಾರಂಗಿ ಜಲಾಶಯ ಭರ್ತಿಯಾಗಿದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಬಾಗಿನ ಸಮರ್ಪಿಸಲಾಗಿದೆ. ಕೇರಳದಲ್ಲಿ ಮಳೆ ಬಿರುಸುಪಡೆದುಕೊಂಡಿದ್ದು, ಇದರಿಂದ ಹಾರಂಗಿ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನ ರುದ್ರಗುಪ್ಪೆ ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆ ; ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ, ಪರಿಶೀಲನೆ – ಕಹಳೆ ನ್ಯೂಸ್

ಮಡಿಕೇರಿ (ಜೂ.29): ದಕ್ಷಿಣ ಕೊಡಗಿನ ಬಿಟ್ಟಂಗಾಲ ಸಮೀಪದ 2ನೇ ರುದ್ರಗುಪ್ಪೆಯಲ್ಲಿ ಕಾಫಿ ತೋಟವೊಂದರಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆಯೇ ಈ ಹುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. 2ನೇ ರುದ್ರಗುಪ್ಪೆಯ ತೋತೇರಿ ಬಳಿಯ ನಾಜಗೊಲ್ಲಿ ಎಂಬಲ್ಲಿನ ಕಾಫಿ ತೋಟವೊಂದರಲ್ಲಿ ಹುಲಿಯ ಮೃತದೇಹ ಮಂಗಳವಾರ ಸಂಜೆ ಕಂಡುಬಂದಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಕಳೆದ ಕೆಲವು ತಿಂಗಳುಗಳಿಂದ ಈ ಭಾಗದಲ್ಲಿ ಹುಲಿಯೊಂದು ಸಂಚರಿಸುತ್ತಾ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿತ್ತು. 2ನೇ ರುದ್ರಗುಪ್ಪೆಯ...
ಕೊಡಗುಕ್ರೈಮ್ಮಡಿಕೇರಿಸುದ್ದಿ

ಹಿಜಾಬ್​-ಕೇಸರಿ ಸಂಘರ್ಷ ; ಕೇಸರಿ ಶಾಲು ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ, ವಿದ್ಯಾರ್ಥಿಯಿಂದ ಮನನೊಂದ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಕೊಡಗು: ರಾಜ್ಯದಲ್ಲಿ ವಿಕೋಪಕ್ಕೆ ತೆರಳಿರುವ ಹಿಜಾಬ್​-ಕೇಸರಿ ಸಂಘರ್ಷಕ್ಕೆ ಸಿಲುಕಿ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೊಂದು ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿರುವ ಅಂಥೋಣಿ ಪ್ರಜ್ವಲ್​ (18) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ. ಕೇಸರಿ ಶಾಲು ಧರಿಸಿದ್ದಕ್ಕೆ ಈತನ ಮೇಲೆ ಒಂದು ಕೋಮಿನ ವಿದ್ಯಾರ್ಥಿಗಳ ಗುಂಪು ದೌರ್ಜನ್ಯ ಆರೋಪ ಹೊರಿಸಿದ್ದಷ್ಟೇ ಅಲ್ಲದೆ ಹಲ್ಲೆಯನ್ನೂ ಮಾಡಿತ್ತು. ಇದರಿಂದ ನೊಂದು ಈತ...
ಕೊಡಗುದಕ್ಷಿಣ ಕನ್ನಡಮಡಿಕೇರಿರಾಜ್ಯಸುದ್ದಿಸುಳ್ಯ

ಹಿಂದೂ ಜಾಗರಣಾ ವೇದಿಕೆ ಪೊಲೀಸ್ ಇಲಾಖೆಗೆ ಮಾಹಿತಿ, ತಡರಾತ್ರಿ ಸಂಪಾಜೆ ಚೆಕ್‍ಪೋಸ್ಟ್ ಬಳಿ ಲಾರಿಯಲ್ಲಿ ಅಕ್ರಮ ಗೋಸಾಗಾಟ ಪತ್ತೆ ; 24 ಗೋವುಗಳ ರಕ್ಷಣೆ – ಕಹಳೆ ನ್ಯೂಸ್

ಮಡಿಕೇರಿ: ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಲಾರಿಯನ್ನು ಪತ್ತೆ ಹಚ್ಚಿ 24 ಗೋವುಗಳನ್ನು ಅರಣ್ಯ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಚೆಕ್‍ಪೊಸ್ಟ್ ಬಳಿ ನಡೆದಿದೆ. ಸಂಪಾಜೆ ಅರಣ್ಯ ತಪಾಸಣಾ ಗೇಟ್ ಬಳಿ ತಡರಾತ್ರಿ ಲಾರಿಯಲ್ಲಿ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾಗ ಅರಣ್ಯ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ, ಲಾರಿ ಸಮೇತ 24 ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಅರಣ್ಯ ಇಲಾಖಾ ಸಿಬ್ಬಂದಿ ತಪಾಸಣೆಗೆ ಮುಂದಾಗುತ್ತಿದ್ದಂತೆ...
1 2 3 4
Page 2 of 4