” ನಾನು ಕೊಡಗಿಗೆ ಹೋದಾಗ ಐದು ಬಾರಿ ಪ್ರತಿಭಟನೆ ನಡೆದಿದೆ. ಒಂದು ಕಡೆ ಬಟ್ಟೆಯಲ್ಲಿ ಕಲ್ಲು ಕಟ್ಟಿಕೊಂಡು ದಾಳಿಯಾಗಿದೆ – ನಾಲ್ಕು ದಿನ ನಿಷೇಧಾಜ್ಞೆ ಹಿನ್ನೆಲೆ, ಮಡಿಕೇರಿ ಚಲೋ ಪ್ರತಿಭಟನಾ ರ್ಯಾಲಿಯನ್ನು ಮುಂದೂಡುತ್ತೇವೆ ” ವಿಪಕ್ಷ ನಾಯಕ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ – ಕಹಳೆ ನ್ಯೂಸ್
ಬೆಂಗಳೂರು : ನಾವು ಪಾದಯಾತ್ರೆ ನಡೆಸುತ್ತಿರುವುದು ಕೊಡವರ ವಿರುದ್ಧ ಅಲ್ಲ ಎಂಬ ಸ್ಪಷ್ಟೀಕರಣದೊಂದಿಗೆ ಮಡಿಕೇರಿ ಚಲೋ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ವಿಷಯ ತಿಳಿಸಿದ ಅವರು ಮಡಿಕೇರಿ ಚಲೋ ಮುಂದೂಡಿರುವುದಾಗಿ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇನ್ನು...