ವಿಶ್ವಗುರು ನಾರಾಯಣ ಗುರುಗಳ ತತ್ವಸಂದೇಶಗಳು ಇಂದಿಗೂ ಪ್ರಸ್ತುತ” : ಪ್ರಶಾಂತ್ ಬಿ. ಅನಂತಾಡಿ – ಕಹಳೆ ನ್ಯೂಸ್
ಮಾಣಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮಕ್ಕೆ ನಾರಾಯಣ ಗುರು ತತ್ವ ನಿರ್ದೇಶಕರಾದ ಶ್ರೀಧರ ಪೂಜಾರಿ ಮುಜಾಲ ಅವರ ಮನೆಯಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಶಾಂತ್ ಬಿ. ಅನಂತಾಡಿ ಅವರು, “ವಿಶ್ವಗುರು ನಾರಾಯಣ ಗುರುಗಳು ಕೇವಲ ಒಬ್ಬ ಗುರುವಾಗಿರದೆ, ಸಮಾಜಕ್ಕೆ ಉತ್ತಮ ತತ್ವಸಂದೇಶ ಹಾಗೂ ಮಾರ್ಗದರ್ಶನ ನೀಡಿದ ಮಹಾನ್ ದಾರ್ಶನಿಕರು. ಇಂದಿನ ಸಮಾಜದಲ್ಲಿಯೂ...



