ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಶ್ರಮಿಸಿದ್ದಾರೆ: ರಮಾನಾಥ ರೈ-ಕಹಳೆ ನ್ಯೂಸ್
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವನಿ ಇಲ್ಲದವರ ಧ್ವನಿಯಾಗಿ, ಹಿಂದುಳಿದ ವರ್ಗದ ಮುಖಂಡನಾಗಿ ಸಾಮಾಜಿಕ ನ್ಯಾಯ ವಂಚಿತವರಿಗೆ ನ್ಯಾಯ ಒದಗಿಸುವಲ್ಲಿ ವಿಶೇಷ ಕಾಳಜಿ ವಹಿಸಿ ಶ್ರಮಿಸಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶೋಷಿತ ವರ್ಗದ ಧ್ವನಿಯಾಗಿ ಬಸವಣ್ಣನವರ ಸೈದ್ಧಾಂತಿಕ ನಿಲುವನ್ನು ಜೀವನದಲ್ಲಿ ಅಳವಡಿಸಿಕೊಂಡು ರಾಜ್ಯದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು. ಸಿದ್ದರಾಮಯ್ಯ ಸುದೀರ್ಘ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮಾಜಿ...






