ಸದಸ್ಯತ್ವದ ಅರಿವಿನಿಂದ ನಾಯಕತ್ವದ ಬೆಳಕಿನೆಡೆಗೆ ಯುವ ಪಯಣ : ರಾಜೇಶ್ ಸುವರ್ಣ -ಕಹಳೆ ನ್ಯೂಸ್
ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವೆಯ ಸಂಕಲ್ಪಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರವು ಮಾಣಿ ಕರ್ನಾಟಕ ಪ್ರೌಢಶಾಲೆಯ ಸಭಾಭವನದಲ್ಲಿ ಜರಗಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಬೈಲಾ ತಿದ್ದುಪಡಿ ಸಮಿತಿ ಸಂಚಾಲಕ ರಾಜೇಶ್ ಸುವರ್ಣ ಬಿಸಿ ರೋಡ್ರವರು...







