ಕೈತ್ರೋಡಿ ಶ್ರೀ ಮಂತ್ರದೇವತೆ ಕೊರಗಜ್ಜ ಕ್ಷೇತ್ರದಲ್ಲಿ ಚಂಡಿಕಾಯಾಗ, ಆನಂದ ಗುರೂಜಿ ಭಾಗಿ-ಕಹಳೆ ನ್ಯೂಸ್
ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ಕೊಯ್ಲದ ಕೈತ್ರೋಡಿಯಲ್ಲಿರುವ ಶ್ರೀ ಮಂತ್ರದೇವತೆ ಕೊರಗಜ್ಜ ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.15ರಂದು ರಾಧಾಕೃಷ್ಣ ಭಟ್ ಪೆದಮಲೆ ನೇತೃತ್ವದಲ್ಲಿ ವೇ.ಮೂ.ಸುಬ್ರಹ್ಮಣ್ಯ ಪರಾಡ್ಕರ್ ಗುಂಡ್ಯಡ್ಕ ಪೌರೋಹಿತ್ಯದಲ್ಲಿ ಶ್ರೀಚಂಡಿಕಾಯಾಗ ನಡೆಯಲಿದೆ. ಈ ಸಂದರ್ಭ ಪೂರ್ಣಾಹುತಿ ವೇಳೆ ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ ಮತ್ತು ಶ್ರೀ ಕ್ಷೇತ್ರ ಕಟೀಲಿನ ವೇ.ಮೂ.ಕಮಲಾದೇವಿ ಆಸ್ರಣ್ಣ ಉಪಸ್ಥಿತರಿರುವರು ಎಂದು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕೈತ್ರೋಡಿ ಕ್ವಾರ್ಟಸ್ ನ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ಲೋಕೇಶ್ ತಿಳಿಸಿದರು....







