ಬಂಟ್ವಾಳದ ಕೈತ್ರೋಡಿ ಸಭಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ-ಕಹಳೆ ನ್ಯೂಸ್
ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ಎಂಬಲ್ಲಿ ಕಳೆದ 26 ವರ್ಷಗಳಿಂದ ಕಟೀಲು ಮೇಳದಿಂದ ಸಾರ್ವಜನಿಕ ಯಕ್ಷಗಾನ ಬಯಲಾಟ ಮತ್ತು ಯುವ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ ’ಕಿರು ಸಭಾಂಗಣ’ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಳದ ಅರ್ಚಕ ನಾಗೇಶ ಹೊಳ್ಳ ಮಾತನಾಡಿ ಶುಭ ಹಾರೈಸಿದರು. ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ,...







