ವೀರಕಂಭ ಮಾತೃಶ್ರೀ ಗೆಳೆಯರ ಬಳಗದ ರಜತಾ ಸಂಭ್ರಮದ ಸವಿನೆನಪಿಗಾಗಿ “ಮಾತೃಶ್ರೀ ಆಶ್ರಯ’ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ; ಸಂಘ-ಸಂಸ್ಥೆ ಸಂಘಟನೆ ಗಳನ್ನು ಕಟ್ಟುವುದು ಸುಲಭ ಉಳಿಸುವುದು ಕಷ್ಟ.. ರಾಜೇಶ್ ನಾಯಕ್ – ಕಹಳೆ ನ್ಯೂಸ್
ಕಲ್ಲಡ್ಕ : ಸಂಘ-ಸಂಸ್ಥೆ ಸಂಘಟನೆಗಳನ್ನು ಕಟ್ಟುವುದು ಸುಲಭ ಆದರೆ ಸಂಘ ಸಂಸ್ಥೆಗಳು ಸಂಘಟನೆಗಳು ದೀರ್ಘವಾಗಿ ಜೀವಂತಿಕೆಯಿಂದ ಕೂಡಿ ಕಾರ್ಯರೂಪಗೊಳ್ಳಬೇಕಾದರೆ ಅವರೊಳಗಿನ ಮನಸ್ಥಿತಿಗಳು ಏಕರೂಪವಾಗಿರಬೇಕು, ಸಮಾಜಕ್ಕೆ ಸಹಾಯ ಮಾಡುವ ಮನೋಭಾವ ಎಲ್ಲರಲ್ಲೂ ಮೂಡಿ ಬರಬೇಕು. ವಿವಿಧ ವಯೋಮಾನದ ವಿವಿಧ ಮನಸ್ಥಿತಿಗಳನ್ನು ಹೊಂದಿರುವ ಸದಸ್ಯರನ್ನೆಲ್ಲಾ ಒಂದೇ ಚೌಕಟ್ಟಿನಲ್ಲಿ ಹೊಂದಿಸಲು ಮತ್ತು ಸಮಾಜ ಸೇವೆಯ ಮನೋಭಾವನೆ ಬೆಳೆಸುವುದು ತುಂಬಾ ಕಷ್ಟದ ಕೆಲಸ, ಇಂತಹ ಪರಿಸ್ಥಿತಿಯಲ್ಲೂ ಕಳೆದ 25 ವರ್ಷಗಳಿಂದ ಊರಿನಲ್ಲಿ ಉತ್ತಮ ಸಂಘಟನೆ ಎನಿಸಿಕೊಂಡು...







