ಶಂಭೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿ ಬಾಲ್ ಪಂದ್ಯಾಟ – ಕಹಳೆ ನ್ಯೂಸ್
ಕಲ್ಲಡ್ಕ:ಯಾವುದೇ ಕ್ರೀಡೆಯಲ್ಲಿ ಶಿಸ್ತು ಮುಖ್ಯವಾಗಿದ್ದು,ಕ್ರೀಡೆಗಳು ಕೇವಲ ಆಟವಲ್ಲ ,ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದೆ. ಈ ಸ್ಪರ್ಧೆಗಳು ಕ್ರೀಡಾ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಹೇಳಿದರು. ಅವರು ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ...







