ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಂಟ್ವಾಳ ಕಿನ್ನಿಬೆಟ್ಟು ತುಳಿಸಿ ಸುರೇಂದ್ರ ಪೂಜಾರಿಯವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಭಜನಾ ಸಂಕೀರ್ತನೆ -ಕಹಳೆ ನ್ಯೂಸ್
ಬಂಟ್ವಾಳ: ನಾರಾಯಣಗುರುಗಳು ಸರ್ವರನ್ನೂ ಒಳಗೊಂಡ ವಿಶ್ವಮಾನವ ಧರ್ಮವನ್ನು ಸ್ಥಾಪಿಸಿದರು. ಧರ್ಮಕೇಂದ್ರಗಳು ಅಶಕ್ತರ ಬದುಕಿಗೆ ದಾರಿದೀಪವಾಗಬೇಕು ಎಂಬ ನಾರಾಯಣಗುರುಗಳ ಸಂದೇಶ ಪ್ರಸ್ತುತ ಯುವ ಸಮಾಜದ ವ್ಯವಸ್ಥೆಯಲ್ಲಿ ಮೈದಳೆಯುವುದನ್ನು ನಿರೀಕ್ಷಿಸಬೇಕಾಗಿದೆ. ಯುವವಾಹಿನಿ ಸಂಘಟನೆಯ ಯಶಸ್ವಿ ಕಾರ್ಯಕ್ರಮ ಗುರುತತ್ವವಾಹಿನಿ ಸಾಮಾಜಿಕ ಸುಧಾರಣೆಯ ಕೈಂಕರ್ಯಕ್ಕೆ ಮುನ್ನುಡಿ ಬರೆದಿದೆ ಎಂದು ಬಂಟ್ವಾಳ ಲಯನ್ಸ್ ಕ್ಲಬ್ನ ನಿಕಟಪೂರ್ವ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ ಬಂಟ್ವಾಳ ತಿಳಿಸಿದರು. ಅವರು ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಂಟ್ವಾಳ ಕಿನ್ನಿಬೆಟ್ಟು ತುಳಿಸಿ ಸುರೇಂದ್ರ...







